ಕಲಬುರಗಿ | ಕಳಪೆ ಬಿತ್ತನೆ ಬೀಜ ವಿತರಣೆ; ಮಿಲ್‌ ವಿರುದ್ಧ ಕ್ರಮಕ್ಕೆ ಎಐಕೆಕೆಎಂಎಸ್‌ ಆಗ್ರಹ

Date:

Advertisements

ಉತ್ತಮ ಇಳುವರಿ ಬರುವ ಬಿತ್ತನೆ ಬೀಜಗಳನ್ನು ನೀಡುತ್ತೇವೆಂದು ನಂಬಿಸಿ, ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ತಪ್ಪಿತಸ್ಥ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್‌) ಒತ್ತಾಯಿಸಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಸುಮಾರು 25ಕ್ಕೂ ಅಧಿಕ ರೈತರಿಗೆ ‘ಫತಾಹ ಇಂಡಸ್ಟಿ’ ಎಂಬ ಶೇಂಗಾ ಮಿಲ್‌ ಮಾಲೀಕರು ಕಳಪೆ ಬಿತ್ತನೆ ಬೀಜ ವಿತರಿಸಿದ್ದಾರೆ. ಇದರಿಂದಾಗಿ, ಸರಿಯಾಗಿ ಬೆಳೆ ಬಾರದೆ, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ಮೋಸ ಮಾಡಿರುವ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಬಿತ್ತನೆ ಮಾಡಿದ್ದ ಬೀಜಗಳ ಪೈಕಿ ಸುಮಾರು 40% ಬೀಜಗಳು ಮೊಳಕೆಯನ್ನೇ ಹೊಡೆದಿಲ್ಲ. ಬೆಳೆದ ಸಸಿಗಳು ರೋಗ ಬಾಧಿಸಿದೆ. ಮಿಲ್‌ ಮಾಲೀಕರು ಈ ಕಳಪೆ ಬೀಜಕ್ಕೆ ಪ್ರತಿ ಕ್ವಿಂಟಾಲ್‌ಗೆ 13,200 ರೂ. ಪಡೆದು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

ಪ್ರತಿಭಟನೆಯಲ್ಲಿ ಮಹೇಶ್ ಎಸ್.ಬಿ, ಬಿ. ಭಗವಾನ್ ರೆಡ್ಡಿ, ಗುಂಡಣ್ಣ ಕುಂಬಾರ್‌, ಅನೀಲಗೌಡ, ಶರಣು ಗಂಜಿ, ಮರೆಪ್ಪ ಗಂಜಿ, ಸಾಬಣ್ಣ, ಶಿವು, ನಾಗಪ್ಪ ನಾಯಕೋಡಿ, ಗೌಡಪ್ಪ, ಸಾಬಣ್ಣ ಗಂಜಿರ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X