- ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು
- ಸಂತ್ರಸ್ತ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೂ ಸಾಲ
ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ’ ಯೋಜನೆ ಆರಂಭಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಸಾಂತ್ವನ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ” ಎಂದರು.
“ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದು. ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕುವ ಕುಟುಂಬಗಳಿಗೆ ನೆರವು ಸಿಗಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ
ಇದೇ ಸಂದರ್ಭದಲ್ಲಿ ಯೋಜನಾ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದರು. ಯೋಜನೆ ಇಲಾಖೆ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಸಂಬಂಧ
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಗುರುವಾರ
ಕೆಎಂಡಿಸಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ರಾದ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.