ಪ್ರಕೃತಿ ವಿಕೋಪ-ಕೋಮು ಗಲಭೆ ಸಂತ್ರಸ್ತರಿಗೆ ಸಾಲಸೌಲಭ್ಯದ ‘ಸಾಂತ್ವನ’ ಯೋಜನೆಗೆ ಚಾಲನೆ

Date:

Advertisements
  • ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು 
  • ಸಂತ್ರಸ್ತ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೂ ಸಾಲ

ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ’ ಯೋಜನೆ ಆರಂಭಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಸಾಂತ್ವನ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ” ಎಂದರು.

“ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದು. ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕುವ ಕುಟುಂಬಗಳಿಗೆ ನೆರವು ಸಿಗಲಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

ಇದೇ ಸಂದರ್ಭದಲ್ಲಿ ಯೋಜನಾ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದರು. ಯೋಜನೆ ಇಲಾಖೆ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಸಂಬಂಧ
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಗುರುವಾರ
ಕೆಎಂಡಿಸಿ ಸಭಾಂಗಣದಲ್ಲಿ ಸಭೆ ನಡೆಸಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ರಾದ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X