ಏಕದಿನ ವಿಶ್ವಕಪ್ 2023 | ಭಾರತಕ್ಕೆ ಸವಾಲಿನ ಗುರಿ ನೀಡಿದ ಬಾಂಗ್ಲಾ

Date:

Advertisements

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾ ಬ್ಯಾಟಿಂಗ್‌ ಆಯ್ದುಕೊಂಡು ಲಿಟ್ಟನ್‌ ದಾಸ್, ತಂಝೀದ್ ಹಸನ್, ಮುಶ್ಫಿಕರ್ ರಹೀಮ್ ಹಾಗೂ ಮಹಮ್ಮದುಲ್ಲಾ ಅವರ ಸಮಯೋಚಿತ ಆಟದಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್‌ ಪೇರಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್‌ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್‌ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್‌ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51)  ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್‌ ಯಾದವ್‌ ಮುರಿದರು.

Advertisements

ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್‌ ಹಾಗೂ ಜಡೇಜಾ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್‌ ಕಡೆ ಮುಖಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಲಿಟ್ಟನ್‌ ದಾಸ್‌ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್‌ಗಳಲ್ಲಿ ಬಾಂಗ್ಲಾದೇಶ 256 ರನ್‌ ಕಲೆ ಹಾಕಿತು.

ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್

ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್‌ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್‌ನ ಬಾಕಿ ಮೂರು ಎಸೆತವನ್ನು ವಿರಾಟ್‌ ಕೊಹ್ಲಿ ಮಾಡಿ 2 ರನ್‌ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X