ವಿಜಯಪುರ | ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

Date:

Advertisements

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿದ್ದು, ಬರ ಆವರಿಸಿದ್ದು, ವಿದ್ಯುತ್ ಅಭಾವವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ‌ ಅಸಮರ್ಪಕ ವಿದ್ಯುತ್ ಆಟಕ್ಕೆ ಬೇಸತ್ತ ರೈತರು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು ಬಿಟ್ಟು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ.

“ಪ್ರತಿದಿನ ತಡರಾತ್ರಿ ವಿದ್ಯುತ್‌ ನೀಡುತ್ತಾರೆ. ಕತ್ತಲೆಯಲ್ಲಿ ಹೊಲಗಳಿಗೆ ಹೋಗಿ ನೀರುಣಿಸುವುದು ಹೇಗೆ?. ಕತ್ತಲೆಯಲ್ಲಿ ಜಲಚರ ಪ್ರಾಣಿಗಳಿಂದ ತೊಂದರೆ ಉಂಟಾಗುತ್ತಿದೆ ಎಂದರೂ ಕೂಡ ಅಧಿಕಾರಿಗಳು ಕೇಳುತ್ತಿಲ್ಲ. ರಾತ್ರಿ ವೇಳೆ ವಿದ್ಯುತ್ ನೀಡಿದರೆ ನಾವೇನು ಮಾಡೋದು. ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲೆಂದು ಜಮೀನಿನಲ್ಲಿ ಸಿಕ್ಕ ಮೊಸಳೆ ತಂದಿದ್ದೇವೆ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಹಣ್ಣು-ಹೂವುಗಳ ಬೆಲೆ ಏರಿಕೆ

Advertisements

ನಿನ್ನೆ ರಾತ್ರಿ ಪಾಳಿಯಲ್ಲಿ ನೀರು ಹಾಯಿಸುವಾಗ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದೇ ಮೊಸಳೆಯನ್ನು ಹಿಡಿದು ಟ್ರ್ಯಾಕ್ಟರ್ ಮೂಲಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ತಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮನವೊಲಿಸಿ ಮೊಸಳೆ ತೆಗೆದುಕೊಂಡ ಹೋಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X