ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

Date:

Advertisements
  • ಬಿಜೆಪಿ ಸರ್ಕಾರ, ಐಟಿ ಅಧಿಕಾರಿಗಳ ವಿರುದ್ಧ ಗುಡುಗಿದ ದಿನೇಶ್‌ ಗುಂಡೂರಾವ್‌
  • ʼಸೋಲುವ ಭೀತಿಯಿಂದ ತೊಂದರೆ ಕೊಡಬೇಕು ಎಂಬುದು ಬಿಜೆಪಿ ದುರುದ್ದೇಶ’

ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ರೂ.ಹಣ ನೀಡುತ್ತಿದೆ. ಅದು ನಮಗಿರುವ ಮಾಹಿತಿ ಪ್ರಕಾರ ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಸರ್ಕಾರ ಆ ಹಣ ಸಾಗಿಸುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದ್ದಾರೆ.

ಗಾಂಧಿನಗರದ ತಮ್ಮ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಬಿಜೆಪಿಗೆ ಅಧಿಕಾರಿಗಳೆಲ್ಲರೂ ರಕ್ಷಣೆ ಕೊಡುತ್ತಿದ್ದಾರೆ. ಎಲ್ಲಿಲ್ಲಿ ಹಣ ಇಡಬೇಕು, ಎಲ್ಲಿಗೆ ಕಳುಹಿಸಬೇಕು ಎನ್ನುವುದು ಅವರಿಗೆ ಸರಿಯಾಗಿ ಗೊತ್ತಿದೆ” ಎಂದರು.

“ಐಟಿ, ಇಡಿ, ಸಿಬಿಐ ಬಿಜೆಪಿಯ ಖಾಸಗಿ ವಿಭಾಗಗಳಾಗಿವೆ. ಅಭ್ಯರ್ಥಿಗಳಿಗೆ ಪೊಲೀಸ್ ವಾಹನಗಳಲ್ಲಿ ಅಥವಾ ಐಟಿ ಅಧಿಕಾರಿಗಳೇ ನೇರವಾಗಿ ತಲುಪಿಸಬಹುದು” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

“ಐಟಿ, ಇಡಿ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್‍ಗೆ ಯಾಕೆ ಭಯ ಎಂಬ ಪ್ರಶ್ನೆ ಸಿಎಂ ಬೊಮ್ಮಾಯಿ ಕೇಳಿದ್ದಾರೆ. ಭಯ ನಮಗಿಲ್ಲ, 2018, 2019ರ ಚುನಾವಣೆ ಸಂದರ್ಭದಲ್ಲಿ ನಾವೂ ನೋಡಿದ್ದೇವೆ. ಆಗ ಕಾಂಗ್ರೆಸ್-ಜೆಡಿಎಸ್‍ನವರು ಮಾತ್ರ ಐಟಿ, ಇಡಿ ಕಣ್ಣಿಗೆ ಕಾಣಿಸಿದ್ದು. ಈ ಬಾರಿಯೂ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಸೋಲುವ ಭೀತಿಯಿಂದ ಹೇಗಾದರೂ ತೊಂದರೆ ಕೊಡುವುದು ಬಿಜೆಪಿಯ ದುರುದ್ದೇಶ” ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಗಾದಿಯ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಎಲ್ಲ ಪಕ್ಷದಲ್ಲೂ ಸಿಎಂ ಕುರ್ಚಿಗೆ ಪೈಪೋಟಿ ಇದ್ದೇ ಇರುತ್ತದೆ. ಪೈಪೋಟಿ ಇಲ್ಲದೇ ಹೋದರೆ ಅದು ರಾಜಕೀಯ ಅನ್ನಿಸಿಕೊಳ್ಳುವುದಿಲ್ಲ. ಆದರೆ, ಸ್ಪರ್ಧೆ ಆರೋಗ್ಯಕರವಾಗಿ ಇರಬೇಕು. ಇನ್ನು ಕಾಂಗ್ರೆಸ್‍ನ ಯಾವುದೇ ಹುದ್ದೆಗಳಿಗೆ ಪೈಪೋಟಿ ನಡೆದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X