ನಕಲಿ ವೋಟರ್‌ ಐಡಿ ತಯಾರಿಕೆ ಆರೋಪ; ಭೈರತಿ ಸುರೇಶ್‌ ಆಪ್ತ ಸೇರಿ ಮೂವರು ಸಿಸಿಬಿ ವಶಕ್ಕೆ

Date:

Advertisements
  • ‘ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದಾನೆ’ 
  • ‘ದುಡ್ಡು ಕೊಟ್ಟರೆ ನಕಲಿ ವೋಟರ್ ಐಡಿ, ಡಿಎಲ್ ಮಾಡಿಕೊಡುತ್ತಿದ್ದರು’

ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ ಮೇಲೆ ಸಚಿವ ಭೈರತಿ ಸುರೇಶ್‌ ಅವರ ಆಪ್ತ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಡ್ಡು ಕೊಟ್ಟರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ, ಮೌನೇಶ್‌ ಕುಮಾರ್‌, ಭಗತ್‌ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇವರಲ್ಲಿ ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದು, ಅವರ ಜೊತೆಗಿನ ಸಾಕಷ್ಟು ಫೋಟೋಗಳು ವೈರಲ್‌ ಆಗುತ್ತಿದೆ.

Advertisements

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚಿಲುಮೆ ಸಂಸ್ಥೆ ಹೆಸರಿನಲ್ಲಿ ವೋಟರ್‌ ಐಡಿಯಿಂದ ಹೆಸರುಗಳನ್ನು ಡಿಲೀಟ್‌ ಮಾಡಿರುವ ಆರೋಪ ಕೇಳಿಬಂದಿತ್ತು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಕಲಿ ವೋಟರ್‌ ಐಡಿ ತಯಾರಿಸುತ್ತಿದ್ದ ಈ ಮೂವರ ಪ್ರಕರಣ ಮಹತ್ವ ಪಡೆದುಕೊಂಡಿದೆ.

m3

ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗುವುದಕ್ಕೆ ಸಹಕಾರ ನೀಡಿದ್ದಾರೆ ಎಂಬ ಆರೋಪ ಇವರ ಮೇಲಿದೆ. ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ ಎನ್ನಲಾಗಿದೆ.

ಯಾವುದೇ ಕ್ಷೇತ್ರದ ವೋಟರ್ ಐಡಿ, ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಾರೆ ಎಂಬ ಆರೋಪದ ಬಗ್ಗೆ ಮಾಹಿತಿ ಪಡೆದು, ದಾಳಿ ನಡೆಸಿದ ಸಿಸಿಬಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೃತ್ಯಕ್ಕೆ ಬಳಸುತಿದ್ದ ಕಂಪ್ಯೂಟರ್ ಸೇರಿ ಹಲವಾರು ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆದರೆ ಆರೋಪಿಗಳನ್ನು ಇನ್ನೂ ಬಂಧನ ಮಾಡಿಲ್ಲ ಎನ್ನಲಾಗಿದೆ. ಕೇವಲ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X