ತುಮಕೂರು | ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡದಿದ್ದರೆ ಪ್ರತಿಭಟನೆ ಸ್ವರೂಪ ತೀವ್ರ: ಕೆಪಿಆರ್‌ಎಸ್ ಯಶವಂತ್

Date:

Advertisements

ಸರ್ಕಾರಿ ಕಂದಾಯ ಭೂಮಿಯನ್ನು ಯಾವುದೇ ಭೌತಿಕ ಪರಿಶೀಲನೆ ನಡೆಸದೆ, ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಎಂಆರ್‌ಗಳನ್ನು ರದ್ದುಪಡಿಸಬೇಕು. ಪೊಲೀಸ್ ಕಾವಲಿನಲ್ಲಿ ಗಿಡ ನೆಡುವ ಕಾಮಗಾರಿಯನ್ನು ನಿಲ್ಲಿಸಬೇಕು. ದೌರ್ಜನ್ಯ-ದಬ್ಬಾಳಿಕೆ ಮೂಲಕ ಬಗರ್ ಹುಕಂ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಿಲ್ಲಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಅವರು ಎಚ್ಚರಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಗಂಗಯ್ಯನಪಾಳ್ಯದಲ್ಲಿ ರೈತರ ಬಗರ್ ಹುಕುಂ ಭೂಮಿಗೆ ಅರಣ್ಯ ಇಲಾಖೆಯವರು ನಡೆಸಿರುವ ಅತಿಕ್ರಮ ಪ್ರವೇಶ ಖಂಡಿಸಿ ರೈತರು ನಡೆಸುತ್ತಿರುವ ಮೂರನೇ ದಿನದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಅರಣ್ಯ ಇಲಾಖೆಯ ಕಾನೂನುಬಾಹಿರ ಕೆಲಸಕ್ಕೆ ಸುಮಾರು 400 ಮಂದಿ ಪೊಲೀಸರ ಕಾವಲು ಕಾನೂನುಬದ್ಧ ರೈತರ ಹಕ್ಕುಗಳ ಮೇಲೆ ದಾಳಿಯಾಗಿದೆ. ಬಗರ್ ಹುಕಂ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿರುವ ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವಾಗ, ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿರುವುದು ಕಾನೂನುಬಾಹಿರ” ಎಂದು ಆರೋಪಿಸಿದರು.

Advertisements

ರೈತ ಹೋರಾಟ ತುಮಕೂರು

“ಪೊಲೀಸರ ಸರ್ಪಗಾವಲಿನಲ್ಲಿ ಸುಮಾರು ಐದು ತಿಂಗಳ ಹಿಂದೆ ಅರಣ್ಯ ಇಲಾಖೆ ಅತಿಕ್ರಮ ವಿರೋಧಿಸಿದ ರೈತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದ್ದು, ಹತ್ತಾರು ರೈತರು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗಂಗಯ್ಯನಪಾಳ್ಯದ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾದ ಬಳಿಕ ಜಿಲ್ಲಾಧಿಕಾರಿ ಸೂಚನೆಯಂತೆ ಬಗರ್ ಹುಕಂ ಭೂಮಿ ತಂಟೆಗೆ ಬರುವುದಿಲ್ಲವೆಂದು ಹೇಳಿದ್ದ ಅರಣ್ಯ ಇಲಾಖೆಯವರು ಮತ್ತೆ ತಮ್ಮ ಮಾತು ಉಲ್ಲಂಘಿಸಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗಂಗಯ್ಯನಪಾಳ್ಯದ ರೈತರ ಭೂಮಿ ವಿವಾದವನ್ನು ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಲಿಖಿತ ಮನವಿ ಮಾಡಿದ್ದರೂ, ಪೊಲೀಸ್ ಬಲ ಬಳಸಿ ದೌರ್ಜನ್ಯ ನಡೆಸುವುದು ನಾಗರಿಕ ಸರ್ಕಾರಕ್ಕೆ ಸೂಕ್ತವಾದುದ್ದಲ್ಲ. ವಿವಾದ ಪರಿಹಾರವಾಗುವ ತನಕ ಯಾವುದೇ ರೀತಿಯ ಕಾಮಗಾರಿ ಕೈಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಅರಣ್ಯ ಇಲಾಖೆಗೆ ಸೂಚಿಸಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ 76/5ರ ವ್ಯಾಪ್ತಿಗೆ ನೀರು ಹರಿಸುವಂತೆ ರೈತರ ಆಗ್ರಹ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್ ಎಸ್ ಚನ್ನಬಸವಣ್ಣ, ಪ್ರಧಾನ ಕಾರ್ಯದರ್ಶಿ ಸಿ ಅಜ್ಜಪ್ಪ, ದೂಡ್ಡನಂಜಯ್ಯ, ನರಸಿಂಹಮೂರ್ತಿ, ನಾಗರಾಜು, ರಾಜಮ್ಮ, ಎನ್ ಕೆ ಸುಬ್ರಹ್ಮಣ್ಯ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X