ರಾಯಚೂರು | ಪದವೀಧರ ಶಿಕ್ಷಕರ ನೇಮಕಾತಿ; ಕೆಕೆ ಭಾಗದ ಅಭ್ಯರ್ಥಿಗಳ ಪರಿಗಣನೆಗೆ ಆಗ್ರಹ

Date:

Advertisements

ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ(ಕೆಕೆ) ಭಾಗದ ಅಭ್ಯರ್ಥಿಗಳನ್ನು ಹೊರಗಿಟ್ಟು ನೇಮಕಾತಿ ಕೌ‌ನ್ಸೆಲಿಂಗ್ ನಡೆಸುತ್ತಿರುವದನ್ನು ತಡೆದು ಈ ಭಾಗದ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿ ಪದವೀಧರ ಶಿಕ್ಷಕ ಅಭ್ಯರ್ಥಿಗಳು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟಿಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

“ಪದವೀಧರ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ಆದರೆ ಕೆಎಟಿ(ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ)ಯಲ್ಲಿ ಪ್ರಕರಣವೊಂದು ಬಾಕಿಯಿರುವ ನೆಪದಲ್ಲಿ ಕಲ್ಯಾಣ ಕರ್ನಾಟಕ ಹೊರತುಪಡಿಸಿ ಶಾಲಾ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭಿಸಿದೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಭಾಗದಲ್ಲಿ 5 ಸಾವಿರಕ್ಕೂ ಅಧಿಕ ಶಿಕ್ಷಕ ಹುದ್ದೆಗಳು ಖಾಲಿಯಿವೆ. ಈ ಭಾಗದ ಅಭ್ಯರ್ಥಿಗಳನ್ನು ನೇಮಕ ಮಾಡುವುದರಿಂದ ಶೈಕ್ಷಣಿಕ ಅಭಿವೃದ್ದಿಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ

“ಕೆಎಟಿಯಲ್ಲಿರುವ ಪ್ರಕರಣದ ಹೆಸರಿನಲ್ಲಿ ಈ ಭಾಗವನ್ನು ಬಿಟ್ಟು ಕೌನ್ಸೆಲಿಂಗ್ ನಡೆಸುವುದು ಅಭ್ಯರ್ಥಿಗಳಲ್ಲಿ ಅತಂತ್ರತೆಗೆ ಕಾರಣವಾಗಿದೆ. ಕೆಎಟಿಯಲ್ಲಿ ಬಾಕಿಯಿರುವ ಪ್ರಕರಣವನ್ನು ಇತ್ಯರ್ಥಪಡಿಸಿ ನೇಮಕಾತಿಗೆ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

ಸಚಿವರು ಮನವಿ ಸ್ವೀಕರಿಸಿದ್ದು, ಕೂಡಲೇ ಸರ್ಕಾರದ ಗಮನ ಸೆಳೆದು ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಸದಸ್ಯ ಜಯಣ್ಣ ಸೇರಿದಂತೆ ನೂರಾರು ಸಂಖ್ಯೆಯ ಶಿಕ್ಷಕ ಹುದ್ದೆಯ ಅಭ್ಯರ್ಥಿಗಳು ಭಾಗಿಯಾಗಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X