ಕಲಬುರಗಿ | ಸಾರ್ವಜನಿಕ ಶೌಚಾಲಯದ ಆಸ್ತಿ ಒತ್ತುವರಿ; ಪಿಡಿಒ ಅಮಾನತಿಗೆ ಆಗ್ರಹ

Date:

Advertisements

ಸಾರ್ವಜನಿಕ ಶೌಚಾಲಯದ ಆಸ್ತಿ ಒತ್ತುವರಿ ಮಾಡಿಕೊಂಡು ಸುತ್ತುಗೋಡೆಯನ್ನು ತೆರವುಗೊಳಿಸಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಕುಮ್ಮಕ್ಕು ನೀಡಿದ ಬಳೂರ್ಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆಪರೇಟರ್ ಅವರನ್ನು ಅಮಾನತು ಮಾಡಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಅಫಜಲಪುರ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‌ಪ್ರತಿಭಟನೆ ಬಳಿಕ ಕಾರ್ಯಕರ್ತರು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

“ಬಳೂರ್ಗಿ ಗ್ರಾಮದ ಸಾರ್ವಜನಿಕ ಶೌಚಾಲಯದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ಸುತ್ತು ಗೋಡೆಯನ್ನು ತೆರವುಗೊಳಿಸಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಪಿಡಿಒ ಮತ್ತು ಕಂಪ್ಯೂಟರ್‌ ಆಪರೇಟರ್‌ ಕುಮ್ಮಕ್ಕು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ವ್ಯಕ್ತಿಗಳಿಗೆ ದಂಡ ಹಾಕಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಜತೆಗೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

Advertisements

“ಬಳೂರ್ಗಿ ಗ್ರಾಮದ ದುಧನಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಮಹಿಳೆಯರ ಸಾರ್ವಜನಿಕ ಶೌಚಾಲಯವು ಸುಮಾರು ವರ್ಷಗಳ ಹಿಂದಿನದು. ಸದರಿ ಶೌಚಾಲಯದ ಜಾಗವು ಗ್ರಾಮ ಪಂಚಾಯಿತಿ ಅಧೀನದಲ್ಲಿ ಬರುವುದರಿಂದ ಇದಕ್ಕೆ ಸುತ್ತಗೋಡೆ ನಿರ್ಮಿಸಿರುವುದಿಲ್ಲ. ಸುತ್ತಮುತ್ತಲಿನ ಜಾಗದ ವ್ಯಕ್ತಿಗಳು, ಅವರ ಅಳತೆಯ ಜಾಗವನ್ನು ಮೀರಿ ಸರ್ಕಾರದ ಹೆಚ್ಚಿನ ಜಾಗವನ್ನು ಒತ್ತುವರಿ‌ ಮಾಡಿಕೊಂಡು ಅವರಿಗೆ ಬೇಕಾದಂತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯನ್ನು ಒಡೆದುಹಾಕಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿ, ಕಟ್ಟಡ ನಿರ್ಮಿಸಿದ್ದಾರೆ” ಎಂದರು.

“ಗ್ರಾಮದ ಮಹಿಳೆಯರು ಈ ವಿಷಯವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿ ಮಹಿಳೆಯರಿಗೆ ಮನಬಂದಂತೆ ಬೈದು ಕಳುಹಿಸಿದ್ದಾರೆ. ಆದ್ದರಿಂದ ಬಳೂರ್ಗಿ ಗ್ರಾಮದ ಮಹಿಳೆಯರ ಶೌಚಾಲಯದ ಜಾಗ ಕಬಳಿಕೆ ಆಗಿರುವುದನ್ನು ನೋಡಿದಾಗ ಮಹಿಳೆಯರ ಶೌಚಾಲಯದ ಸರ್ಕಾರಿ ಜಾಗವನ್ನು ಕಬಳಿಸಿದ್ದು, ಅನ್ಯಾಯ ಎಸಗಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರಿ ಆಸ್ತಿ ಕಬಳಿಕೆ ಮಾಡಿರುವುದಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ನೀವು ಸ್ಥಳಕ್ಕೆ ಕೂಡಲೇ ಬರಬೇಕೆಂದು ಮನವಿ ಮಾಡಿದರೂ ಅವರು ಮನಬಂದಂತೆ ಮಾತನಾಡಿ, ಈ ಆಸ್ತಿಯ ವಿಷಯು ನಮಗೆ ಸಂಬಂಧಿಸಿಲ್ಲ. ನಾನು ಅಲ್ಲಿಗೆ ಬರುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದರು” ಎಂದು ಅಲವತ್ತುಕೊಂಡರು.

“ಶೌಚಾಲಯದ ಸರಕಾಗಿ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕೂಡಲೇ ಗ್ರಾಮ ಪಂಚಾಯಿತಿ ಅಧೀನದಲ್ಲಿ ಪಡೆದುಕೊಳ್ಳಬೇಕು ಹಾಗೂ ಸುತ್ತಲೂ ತಡೆಗೋಡೆ ನಿರ್ಮಿಸಬೇಕು. ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಒಡೆದುಹಾಕಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿ ಕಟ್ಟಡ ನಿರ್ಮಿಸಿರುವ ವ್ಯಕ್ತಿಗೆ ದಂಡ ವಿಧಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

“ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಇದಕ್ಕೆ
ಸಂಬಂಧಪಟ್ಟ ಮೇಲಾಧಿಕಾರಿಗಳನ್ನೂ ಅಮಾನತು ಮಾಡಬೇಕು. ಬಳೂರ್ಗಿ ಗ್ರಾಮದ ಮಹಿಳೆಯರಿಗೆ ಉಂಟಾಗಿರುವ ಅನ್ಯಾಯಕ್ಕೆ ತಾವು ನ್ಯಾಯ ಒದಗಿಸಿ, ಕೂಡಲೇ ಶೌಚಾಲಯ, ಹಾಗೂ ಸುತ್ತುಗೋಡೆ ನಿರ್ಮಿಸಿ ಚಾಲನೆ ನೀಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಮನೋಹರ ರಾಠೋಡ, ಮುತ್ತಪ್ಪ ಕುರಿಮನಿ, ಶರಣು ದಿವಾಣಜಗಿ, ನಂದಕುಮಾರ ಹರಳಯ್ಯ, ಬೈಲಪ್ಪ ಗೌರ, ದಯಾನಂದ ಪಾಟೀಲ, ಈರಣ್ಣಗೌಡ ಪಾಟೀಲ, ಶರಣಯ್ಯ ಮಠಪತಿ,
ಜಗದೀಶ ತಳವಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X