ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ ರೋಚಕ ಜಯ

Date:

Advertisements

ನಾಥನ್ ಎಲ್ಲಿಸ್ ಮಾರಕ ಬೌಲಿಂಗ್‌ ಪರಿಣಾಮ ಪಂಜಾಬ್‌ ಕಿಂಗ್ಸ್ ಇಲೆವೆನ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಗಳಿಸಿತು.

ಕೊನೆಯ ಓವರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್,ಧ್ರುವ್ ಜುರೆಲ್ ಸಿಕ್ಸರ್‌ ಬೌಂಡರಿ ಮೂಲಕ ಗೆಲುವಿನ ಭರವಸೆ ಚಿಗುರಿಸಿದರೂ ಗುರಿ ನೆರವೇರಲಿಲ್ಲ.

ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 198 ರನ್‌ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಲಷ್ಟೆ ಶಕ್ತವಾಯಿತು.

Advertisements

ಕೊನೆಯ ಗಳಿಗೆಯಲ್ಲಿ ಸ್ಪೋಟಕ ಆಟವಾಡಿದ ಶಿಮ್ರಾನ್ ಹೆಟ್ಮೆಯರ್ (36),ಧ್ರುವ್ ಜುರೆಲ್ (32) ಸೋಲಿನಲ್ಲೂ ಪ್ರೇಕ್ಷಕರ ಮನದಲ್ಲಿ ಉಳಿದರು.

ಪಂಜಾಬ್‌ ತಂಡದ ನಾಥನ್ ಎಲ್ಲಿಸ್ 30/4 ಹಾಗೂ ಅರ್ಶ್‌ದೀಪ್ ಸಿಂಗ್‌ 47/2 ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್ ತಂಡದ ಪ್ರಭಾಸಿಮ್ರಾನ್, ಶಿಖರ್ ಧವನ್ ಮೊದಲ ಎಸೆತದಿಂದಲೇ ಬ್ಯಾಟ್‌ ಬೀಸಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್ ತಂಡದ ಬೌಲರ್‌ಗಳನ್ನು ಬೆವರಿಳಿಸತೊಡಗಿದರು.

ಸಿಕ್ಸ್ ಹಾಗೂ ಬೌಂಡರಿ ಬಾರಿಸುತ್ತಿದ್ದ ಪ್ರಭಾಸಿಮ್ರಾನ್ ಸಿಂಗ್‌ ಹತ್ತನೇ ಓವರ್‌ನಲ್ಲಿ ಜೇಸನ್‌ ಹೋಲ್ಡರ್‌ ಬೌಲಿಂಗ್‌ನಲ್ಲಿ ವಿಕೇಟ್‌ ಕೀಪರ್‌ ಜಾಸ್‌ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. 34 ಚಂಡುಗಳಲ್ಲಿ 60 ರನ್‌ ಬಾರಿಸಿದ ಪ್ರಭಾಸಿಮ್ರಾನ್ ಬ್ಯಾಟಿಂಗ್‌ನಲ್ಲಿ 7 ಅಮೋಘ ಬೌಂಟರಿ ಹಾಗೂ 3 ಭರ್ಜರಿ ಸಿಕ್ಸರ್‌ ಒಳಗೊಂಡಿದ್ದವು.

ಮೂರನೇ ಕ್ರಮಾಂಕದಲ್ಲಿ ಆಗಮಿಸಿದ ಭಾನುಕಾ ರಾಜಪಕ್ಸೆ ಗಾಯಗೊಂಡು ನಿವೃತ್ತರಾದರೆ, ನಾಲ್ಕನೇ ಕ್ರಮಾಂಕದ ಜಿತೀಶ್ ಶರ್ಮಾ, ಧವನ್‌ಗೆ ಜೊತೆಯಾಗಿ 16 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ 27 ರನ್‌ ಬಾರಿಸಿದರು. ಸಿಕಂದರ್ ರಝಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಒಂದು ರನ್‌ ಗಳಿಸಿ ಅಶ್ವಿನ್‌ಗೆ ಬೌಲ್ಡ್‌ ಆದರು.

ಕೊನೆಯವರೆಗೂ ಆಟವಾಡಿದ ನಾಯಕ ಶಿಖರ್ ಧವನ್‌ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ನೊಂದಿಗೆ 86 ರನ್‌ ಪೇರಿಸಿ ಪಂಜಾಬ್‌ 20 ಓವರ್‌ಗಳಲ್ಲಿ 197/4 ಮೊತ್ತ ದಾಖಲಿಸಲು ಕಾರಣರಾದರು.

ರಾಜಸ್ಥಾನ್‌ ಪರ ಹೋಲ್ಡರ್‌ 2, ಚಹಾಲ್‌ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X