ಕೋಲಾರ | ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

Date:

Advertisements

ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ.

ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು. ಮಾಲೂರು ಶಾಸಕ ಕೆ.ವೈ ನಂಜೇಗೌಡ ಅವರ ಆಪ್ತ ವಲಯದಲ್ಲಿ ಅನಿಲ್ ಗುರುತಿಸಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಕೆಲಸಗಳನ್ನೂ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಶನಿವಾರ ಸಂಜೆ ಮಾಲೂರಿನ ಕಡೆಗೆ ಅವರು ಹೊರಟ್ಟಿದ್ದರು. ಈ ವೇಳೆ, ಅವರನ್ನು ಹಿಂಚಾಲಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ರ್ಶತಳಕ್ಕೆ ಕೋಲಾರ ಎಸ್‌ಪ್‌ ನಾರಾಯಣ್ ಮತ್ತು ಮಾಲೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಓರ್ವ ಅನುಮಾನಾಸ್ಪ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisements

ಇತ್ತೀಚೆಗೆ, ಗಣೇಶ ವಿಸರ್ಜನೆ ವೇಳೆ ಗ್ರಾಮದಲ್ಲಿ ಆರ್ಕೇಸ್ಟ್ರಾ ಆಯೋಜನೆ ಸಂಬಂಧ ಅನಿಲ್ ಹಾಗೂ ಗ್ರಾಮದ ಕೆಲವರು ನಡುವೆ ಜಗಳ ನಡೆದಿತ್ತು. ಅಲ್ಲದೆ, ಅನಿಲ್ ಅವರೊಂದಿಗೆ ಹಲವು ವರ್ಷಗಳಿಂದ ಮುನಿಸಿಕೊಂಡಿದ್ದ ವ್ಯಕ್ತಿಯೊಬ್ಬ ಶನಿವಾರ ಅವರೊಂದಿಗೆ ಮಾತನಾಡಿದ್ದ. ಹೀಗಾಗಿ, ಅನಿಲ್ ಕೊಲೆಯ ಹಿಂದೆ ಹಲವಾರು ಅನುಮಾನಗಳಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X