ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

Date:

Advertisements

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್ ವಿರುದ್ಧ ಪಾಲಿಕೆ ಆಯುಕ್ತ ಅಶೋಕ್​ ದುಡಗುಂಟಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಾಲಿಕೆಯ ಕೌನ್ಸಿಲ್ ಸಭೆಯು 2023-24ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡಲು ನಿರ್ಧಿರಿಸಿತ್ತು. ಅದಕ್ಕೆ ಮೇಯರ್ ಅನುಮೋದನೆ ಪಡೆಯಲು ಪತ್ರ ಸಿದ್ದಪಡಿಸಿತ್ತು. ಆದರೆ, ಪತ್ರದಲ್ಲಿ 2023-24 ಬದಲಾಗಿ 24-25 ಎಂದು ನಮೂದಿಸಲಾಗಿತ್ತು. ಅದನ್ನು ಸರಿಯಾಗಿ ಪರಿಶೀಲಿಸದ ಮೇಯರ್ ಸಹಿ ಹಾಕಿದ್ದರು. ಆದರೆ, ಈಗ ಆ ಪತ್ರವೇ ಕಾಣೆಯಾಗಿವೆ.

ಪತ್ರ ಕಾಣೆಯಾಗಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದಿತ್ತು. ತನಿಖೆ ನಡೆಸಲು ಪಾಲಿಕೆ ನಿರ್ಣಯಿಸಿತ್ತು. ಬಳಿಕ, ಪತ್ರ ಕಾಣೆಯಾಗಿರುವ ಸಂಬಂಧ ತನಿಖೆ ನಡೆಸುವಂತೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisements

“ಪಾಲಿಕೆ ಮೇಯರ್ ಶೋಭಾ ಸೋಮನಾಚೆ ವಿರುದ್ಧ ದೂರು ದಾಖಲಿಸಿದ್ದೇವೆ. ಬಿಜೆಪಿಗರು ಕಡತವನ್ನು ಆಯಕ್ತರೇ ಸರ್ಕಾರಕ್ಕೆ ಸಲ್ಲಿಸುತ್ತಾರೆ. ಅವರನ್ನೇ ಏನೋ ಕೈವಾಡವಿದೆ ಎನ್ನುತ್ತಿದ್ದಾರೆ. ಮೇಯರ್ ಸಹಿ ಮಾಡಿದ ನಂತರವೇ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸುವುದು. ಹೀಗಾಗಿ, ಕಡತವನ್ನು ಯಾರೋ ಬಚ್ಚಿಟ್ಟಿದ್ದಾರೆ. ಕಡತ ಸಿಕ್ಕ ಬಳಿಕ ಸತ್ಯಾಂಶ ಹೊರಬರುತ್ತದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

“ಪಾಲಿಕೆಯಲ್ಲಿ ಮೇಯರ್ ಅವರೇ ಸುಪ್ರೀಂ ಆಗಿರುತ್ತಾರೆ. ಅವರು ಪತ್ರದಲ್ಲಿದ್ದ ತಪ್ಪನ್ನು ಸರಿ ಮಾಡುವುದು ಬಿಟ್ಟು, ಕಡತವನ್ನು ಕಾಣೆಯಾಗಿಸಿ ತಪ್ಪೆಸದ್ದಾರೆ. ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದು ಜಾರಕಿಹೊಳಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X