ಮಹಿಷ ಚಿತ್ರಕ್ಕೆ ಸಿಎಂ ಫೋಟೊ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ; ಎಫ್‌ಐಆರ್‌

Date:

Advertisements

ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್‌ ಫೇಜ್‌ ಅಡ್ಮಿನ್ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ವಿಭಾಗದ ಸೂರ್ಯ ಮುಕುಂದರಾಜ್ ಅವರು ನೀಡಿದ ದೂರನ್ನು ಆಧರಿಸಿ, ‘ಸೀನಾ ಹಿಂದೂಸ್ತಾನಿ’ ಪೇಜ್ ನಿರ್ವಹಣೆ ಮಾಡುತ್ತಿರುವವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

‘ಮಹಿಷಾಸುರ ಉತ್ಸವ ಆಚರಣೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿತ್ತು. ಜತೆಗೆ ಮಹಿಷಾಸುರ ಪ್ರತಿಮೆಗೆ ಮುಖ್ಯಮಂತ್ರಿ ಅವರ ಚಿತ್ರವನ್ನು ಮಾರ್ಫಿಂಗ್ ಮಾಡಿ ಸೇರಿಸಲಾಗಿತ್ತು. ಈ ಮೂಲಕ ಮಹಿಷಾಸುರ ಪ್ರತಿಮೆಯನ್ನು ವಿರೂಪಗೊಳಿಸಿ, ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದ್ದಾರೆ’ ಎಂದು ದೂರು ನೀಡಲಾಗಿತ್ತು.

Advertisements

‘ದಸರಾ ಹಬ್ಬದ ಸಂದರ್ಭದಲ್ಲಿಯೇ ಈ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ. ಈ ಮೂಲಕ ಸಮಾಜದ ಶಾಂತಿಗೆ ಧಕ್ಕೆ ತರಲು ಆರೋಪಿಗಳು ಯತ್ನಿಸಿದ್ದಾರೆ. ಪೇಜ್‌ನ ಅಡ್ಮಿನ್ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಈ ಸಂಬಂಧ ಫೇಸ್‌ಬುಕ್ ಕಂಪನಿಯವರಿಗೂ ಇ-ಮೇಲ್ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಷ ದಸರಾವು ಸಾಂಸ್ಕೃತಿಕ ಪ್ರತಿರೋಧವಾಗಿ ಹೊಮ್ಮಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಷಾಸುರ ದೊರೆಯನ್ನು ಆರಾಧಿಸಲಾಗಿದೆ. ಮೈಸೂರಿನಲ್ಲಿ ಮಹಿಷ ದಸರಾ ಆಚರಿಸದಂತೆ ಸಂಸದ ಪ್ರತಾಪ ಸಿಂಹ ಬೆದರಿಕೆ ಒಡ್ಡಿದ ಬಳಿಕ ಬಿಜೆಪಿಯ ಸ್ಥಳೀಯ ಮುಖಂಡರೇ ಸಂಸದರ ನಿಲುವನ್ನು ವಿರೋಧಿಸಿದ್ದರು.

ಅಕ್ಟೋಬರ್‌ 13ರಂದು ಮೈಸೂರಿನ ಪುರಭವನದ ಅಂಗಳದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಮಹಿಷ ದಸರಾ ಆಚರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X