ರಾಜಸ್ಥಾನ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಕಚೇರಿ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು

Date:

Advertisements

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹಲವಡೆ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್‌ಸಮಂದ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಹಲವು ವಸ್ತುಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ಈ ಹಿಂದೆ, 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಭಾನುವಾರ 83 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ಸಿಗದೇ ಇರುವ ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಚಿತ್ತೋರ್‌ಗಢ, ರಾಜ್‌ಸಮಂದ್, ಬುಂದಿ, ಅಲ್ವಾರ್ ಮತ್ತು ಜೈಪುರದಲ್ಲಿ ಭಾಗದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಈ ಭಾಗದಲ್ಲಿ ಚುನಾವಣೆಯಲ್ಲ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಚಿತ್ತೋರ್‌ಗಢದಲ್ಲಿ ಹಾಲಿ ಶಾಸಕ ಚಂದ್ರಭನ್ ಸಿಂಗ್ ಆಕ್ಯಾ ಅವರನ್ನು ಪಕ್ಷವು ಕೈಬಿಟ್ಟಿದ್ದು, ನರ್ಪತ್ ಸಿಂಗ್ ರಾಜ್ವಿಗೆ ಟಿಕೆಟ್ ನೀಡಿದೆ. ಸತತ ಎರಡು ಅವಧಿಗೆ ಚಿತ್ತೋರ್‌ಗಢದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚಂದ್ರಭಾನ್ ಸಿಂಗ್ ಆಕ್ಯಾ ಅವರ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಪಿ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.

Advertisements

“ಜೋಶಿ ಅವರು ಕಾಂಗ್ರೆಸ್‌ನ ಎನ್‌ಎಸ್‌ಯುಐ ಭಾಗವಾಗಿದ್ದಾಗ ನಾನು ಎಬಿವಿಪಿಯಲ್ಲಿದ್ದೆ. ಆಗಿನಿಂದಲೂ ಜೋಶಿ ಅವರು ನನ್ನ ಮೇಲೆ ದ್ವೇಷ ಹೊಂದಿದ್ದಾರೆ. ಪರಿಣಾಮವಾಗಿ, ನನ್ನ ಟಿಕೆಟ್ ಹಿಂಪಡೆಯಲಾಗಿದೆ” ಎಂದು ಚಂದ್ರಭಾನ್ ಸಿಂಗ್ ಕಿಡಿಕಾರಿದ್ದಾರೆ.

ರಾಜ್‌ಸಮಂದ್‌ನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ದಿನೇಶ್ ಬಡಾಲಾ, ಗಣೇಶ್ ಪಲಿವಾಲ್ ಮತ್ತು ಮಹೇಂದ್ರ ಕೊಠಾರಿ ಬೆಂಬಲಿಗರು ಹಾಲಿ ಶಾಸಕಿ ದೀಪ್ತಿ ಮಹೇಶ್ವರಿ ಅವರನ್ನು ಕಣಕ್ಕಿಳಿಸಿರುವುದನ್ನು ವಿರೋಧಿಸಿ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಸಿಟ್ಟಿಗೆದ್ದ ಕಾರ್ಯಕರ್ತರು ಚುನಾವಣಾ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಟಿಕೆಟ್ ನಿರ್ಧಾರ ವಿರೋಧಿಸಿ ಹಲವು ಮುಖಂಡರು ಮತ್ತು ಬೂತ್ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಉದಯಪುರದಲ್ಲಿ ಉಪಮೇಯರ್ ಪರಸ್ ಸಿಂಘ್ವಿ ತಾರಾ ಚಂದ್ ಜೈನ್ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಹೀಗಾಗಿ, ಅವರು ಕಾರ್ಯಕರ್ತರ ಮುಂದೆ ಭಾವುಕರಾಗಿ ಮಾತನಾಡಿದ್ದು, “ಪಕ್ಷದ ವರಿಷ್ಠರು ಮರುಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

ಜೈಪುರದ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಅಲ್ಲಿ ಹಾಲಿ ಶಾಸಕ ಅಶೋಕ್ ಲಾಹೋಟಿ ಬದಲಿಗೆ ಭಜನ್ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನು ಖಂಡಿಸಿ ಲಾಹೋಟಿ ಬೆಂಬಲಿಗರು ವಿರೋಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X