ಮಂಡ್ಯ | ಎಕ್ಸ್​ಪ್ರೆಸ್​ ವೇ ಎಂಟ್ರಿ ಮತ್ತು ಎಕ್ಸಿಟ್ ಬಂದ್‌; ಸವಾರರ ಪರದಾಟ

Date:

Advertisements

ಟೋಲ್ ಸಂಗ್ರಹದ ನೆಪದಲ್ಲಿ ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಮತ್ತು ಎಕ್ಸಿಟ್​​​ಗಳನ್ನು ಕ್ಲೋಸ್ ಮಾಡಲಾಗಿದೆ, ಹೀಗಾಗಿ, ಬೆಂಗಳೂರಿನಿಂದ ಮಂಡ್ಯಕ್ಕೆ, ಮೈಸೂರಿನಿಂದ ಮಂಡ್ಯಕ್ಕೆ, ಮಂಡ್ಯದಿಂದ ಮೈಸೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸದಾ ವಿವಾದಗಳಿಗೆ ಸುದ್ದಿಯಾಗಿದೆ. ಈ ಹಿಂದೆ, ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಎಂಟ್ರಿ ಹಾಗೂ ಎಕ್ಸಿಟ್​​ಗಳು ಇರಲಿಲ್ಲ. ನೇರವಾಗಿ ಬೆಂಗಳೂರಿನಿಂದ ಮೈಸೂರು ಸಂಚಾರಕ್ಕೆ ಮಾತ್ರ ಅವಕಾಶ ಇತ್ತು. ಆನಂತರ ಪ್ರತಿಭಟನೆ, ಹೋರಾಟಗಳು ನಡೆದ ನಂತರ ಜಿಲ್ಲಾ ಹಾಗೂ ತಾಲೂಕು ಕೇಂದ್ರ ಸಂಪರ್ಕ ಕಲ್ಪಿಸಲು ಎಲ್ಲ ಪಟ್ಟಣಗಳ ಬಳಿ ಎಂಟ್ರಿ ಹಾಗೂ ಎಕ್ಸಿಟ್ ಕಲ್ಪಿಸಲಾಗಿತ್ತು.

ಆದರೆ, ಇದೀಗ ಟೋಲ್ ಸಂಗ್ರಹದ ನೆಪವೊಡ್ಡಿ, ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಹಾಗೂ ಎಕ್ಸಿಟ್​​​ಗಳನ್ನ ಕ್ಲೋಸ್ ಮಾಡಲಾಗಿದೆ. ಹೀಗಾಗಿ, ಮಂಡ್ಯದಿಂದ ಮೈಸೂರು ಮತ್ತು ಬೆಂಗಳೂರು ಕಡೆಗೆ ಪ್ರಯಾಣಿಸುವ ವಾಹನಗಳು ಸರ್ವಿಸ್ ರಸ್ತೆಯಲ್ಲಿಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisements

ಈಗಾಗಲೇ, ಎಕ್ಸ್‌ಪ್ರೆಸ್‌ ವೇನಲ್ಲಿ ದುಬಾರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಬೆಂಗಳೂರಿನ ಕಣಮಿಣಿಕೆ ಮತ್ತು ಮಂಡ್ಯದ ಗಣಂಗೂರು ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಬೆಂಗಳೂರಿನಿಂದ ಬರುವ ವಾಹನ ಸವಾರರು ಪಾಂಡವಪುರಕ್ಕೆ ಹೋಗಬೇಕಾದರೆ, ಇಂಡವಾಳು ಬಳಿ ಎಕ್ಸ್‌ಪ್ರೆಸ್‌ ವೇನಿಂದ ಹೊರ ಬರುತ್ತಿದ್ದರು. ಆದರೆ, ಇದೀಗ ಆ ಎಕ್ಸಿಟ್ಅನ್ನು ಕ್ಲೋಸ್ ಮಾಡಲಾಗಿದೆ.

ಇನ್ನು ಮಂಡ್ಯದಿಂದ ಮೈಸೂರಿಗೆ ಹೋಗುವವರು ಇಂಡುವಾಳು ಬಳಿ ಇರುವ ಎಂಟ್ರಿ ಮೂಲಕ ಎಕ್ಸ್‌ಪ್ರೆಸ್‌ ವೇಗೆ ಬರುತ್ತಿದ್ದರು. ಎಂಟ್ರಿಯನ್ನು ಬಂದ್‌ ಮಾಡಲಾಗಿದ್ದು, ಮಂಡ್ಯದಿಂದ ಮೈಸೂರಿನವರೆಗೂ ಸರ್ವೀಸ್‌ ರಸ್ತೆಯಲ್ಲೇ ಪ್ರಯಾಣಿಸಬೇಕಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X