ಬೀದಿ ನಾಯಿಗಳ ದಾಳಿ ತುತ್ತಾಗಿದ್ದ ವಾಘ್ ಬಕ್ರಿ ಟೀ ಬ್ರಾಂಡ್ ಗ್ರೂಪ್ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 15 ರಂದು ದೇಸಾಯಿ ಅವರು ವಾಕಿಂಗ್ಗೆ ತೆರಳಿದ್ದಾಗ, ಅವರ ಮೇಲೆ ಅವರ ನಿವಾಸದ ಹೊರಗೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಈ ವೇಳೆ, ಅವರು ಕೆಳಗೆ ಬಿದ್ದು ಮೆದುಳಿನ ರಕ್ತಸ್ರಾವವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ದೇಸಾಯಿ ಅವರನ್ನು ಏಳು ದಿನಗಳ ಕಾಲ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಭಾನುವಾರ ಅವರು ನಿಧನರಾಗಿದ್ದು, ಸೋಮವಾರ ಬೆಳಗ್ಗೆ ಅವರು ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ.