18 ಬಾರಿ ಸೋಲು; ಮತ್ತೆ ಚುನಾವಣಾ ಕಣಕ್ಕಿಳಿದ ಸೋಲಿನ ಸರದಾರ

Date:

Advertisements

ಕಳೆದ 35 ವರ್ಷಗಳಲ್ಲಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿ ಬರೋಬ್ಬರಿ 18 ಬಾರಿ ಸೋಲುಂಡಿರುವ ವ್ಯಕ್ತಿಯೊಬ್ಬರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಇಂಧೋರ್‌-4 ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಇಂಧೋರ್ ನಿವಾಸಿ, 63 ವರ್ಷದ ಪರಮಾನಂದ ಟೋಲಾನಿ ಅವರು 18 ಬಾರಿ ಸೋಲು ಕಂಡರೂ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ರಿಯಲ್‌ ಎಸ್ಟೇಟ್ ಉದ್ಯಮಿ ಆಗಿರುವ ಅವರು 18 ಬಾರಿಯೂ ಠೇವಣಿ ಕಳೆದುಕೊಂಡಿದ್ದಾರೆ. ತಮ್ಮ ಸೋಲುಗಳಿಂದಲೇ ‘ಇಂಧೋರ್ ಧರ್ತಿ ಪಕಡ್’ ಎಂಬ ಹೆಸರು ಪಡೆದಿದ್ದಾರೆ. ಇದೀಗ ಅವರು 19ನೇ ಬಾರಿಗೆ ಸ್ಪತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಅವರ ಕುಟುಂಬ ರಾಜಕೀಯೇತರ ಹಿನ್ನೆಲೆಯಿಂದ ಬಂದಿದ್ದು, ಕಳೆದ ಎರಡು ತಲೆಮಾರುಗಳಿಂದ ಚುನಾವಣೆಗೆ ಸ್ಪರ್ಧಿಸಿ ಹೆಸರುವಾಸಿಯಾಗಿದೆ. ಆದರೆ, ಅವರ ಕುಟುಂಬದ ಯಾವುದೇ ಸದಸ್ಯರು ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ. ಬದಲಿಗೆ, ಆ ಕುಟುಂಬದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲರೂ ತಮ್ಮ ಭದ್ರತಾ ಠೇವಣಿ ಕಳೆದುಕೊಂಡಿದ್ದಾರೆ. ಅವರ ತಂದೆ ಕೂಡ 30 ವರ್ಷಗಳ ಕಾಲ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ.

Advertisements

ಸೋಮವಾರ ನಾಮಪತ್ರ ಸಲ್ಲಿಸಿರುವ ಟೋಲಾನಿ, “ಇದು ನನ್ನ 19ನೇ ಚುನಾವಣೆ. ಇದಕ್ಕೂ ಮುನ್ನ ಲೋಕಸಭೆ, ವಿಧಾನಸಭೆ, ಮೇಯರ್ ಸ್ಥಾನ ಸೇರಿದಂತೆ 18 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಒಮ್ಮೆ ಮೇಯರ್‌ ಸ್ಥಾನ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದರಿಂದ ಪತ್ನಿ ಲಕ್ಷ್ಮಿ ಟೋಲಾನಿ ಅವರನ್ನು ಮೇಯರ್‌ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದೆ” ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಪ್ರತಿ ಬಾರಿಯೂ ಚುನಾವಣಾ ಆಯೋಗವು ತಮ್ಮ ಭದ್ರತಾ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬೇಕಾದರೂ, ಚುನಾವಣೆಯಲ್ಲಿ ಸ್ಪರ್ಧಿಸುವ ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ” ಎಂದು ಟೋಲಾನಿ ಹೇಳಿದ್ದಾರೆ.

“ಇಂದೋರ್‌ನ ಜನರು ತುಂಬಾ ಬುದ್ಧಿವಂತರು. ಅವರು ಖಂಡಿತವಾಗಿಯೂ ನನ್ನನ್ನು ಎಂದಾದರೂ ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ-ಜೆಡಿಎಸ್‌ ಮೈತ್ರಿ | ನಾವು ಸ್ವತಂತ್ರವಾಗಿರುತ್ತೇವೆ ಎಂದ ಕೇರಳ ಜೆಡಿಎಸ್

ಚುನಾವಣೆಯಲ್ಲಿ ಗೆದ್ದರೆ, 1,000 ಚದರ ಅಡಿ ವಿಸ್ತೀರ್ಣದ ಕಟ್ಟಡಗಳ ಆಸ್ತಿ ತೆರಿಗೆಯಿಂದ ಜನರಿಗೆ ಸಂಪೂರ್ಣ ವಿನಾಯತಿ ನೀಡುತ್ತೇನೆ. ಮನೆ-ಮನೆ ಕಸ ಸಂಗ್ರಹ ಮಾಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

“ಇಂಧೋರ್‌ನಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ನನ್ನ ತಂದೆ ಮೆಥಾರಾಮ್ ಟೋಲಾನಿ ಅವರು ತಮ್ಮ ಜೀವಿತಾವಧಿಯಲ್ಲಿ 30 ವರ್ಷಗಳ ಕಾಲ ನಿರಂತರವಾಗಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. 1988ರಲ್ಲಿ ನನ್ನ ತಂದೆಯ ನಿಧನದ ನಂತರ ನಾನು 1989ರಿಂದ ಚುನಾವಣೆಗೆ ಸ್ಪರ್ಧಿಸಲು ಆರಂಭಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X