ವರ್ತೂರು ಸಂತೋಷ್​ಗೆ ಲಾಕೆಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ

Date:

Advertisements

ಹುಲಿ ಉಗುರು ಇರುವ ಲಾಕೆಟ್‌ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ, ಸಂತೋಷ್ ಅವರಿಗೆ ಲಾಕೆಟ್‌ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ ಎದುರಾಗಿದೆ.

ಸದ್ಯ ಅರಣ್ಯಾಧಿಕಾರಿಗಳು ಸಂತೋಷ್ ಅವರಿಗೆ ದೊರೆತ ಹುಲಿ ಉಗುರಿನ ಮೂಲ ಕೆದಕಲು ತಯಾರಿ ನಡೆಸಿದ್ದಾರೆ. ಇದೀಗ ಹುಲಿ ಉಗುರಿಗೆ ಲಾಕೆಟ್ ಮಾಡಿ ಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕ ಹಾಗೂ ಸಂತೋಷ್ ಆಪ್ತ ರಂಜಿತ್ ಅವರಿಗೂ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಂಜಿತ್‌ ಅವರು ತನಿಖೆಗೆ ಹಾಜರಾದ ದಿನ ಆರೋಪಗಳು ಸಾಬೀತಾದರೆ, ಬಂಧನವಾಗುವ ಸಾಧ್ಯತೆಗಳು ಹೆಚ್ಚಾಗಿವೆ.

Advertisements

ಸದ್ಯ ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್ ಅವರು ಧರಿಸಿದ್ದ ಹುಲಿ ಉಗುರಿನ ಮೂಲವನ್ನು ಕೆದಕಲು ಮುಂದಾಗಿದ್ದಾರೆ. ಈ ಹುಲಿ ಉಗುರು ವರ್ತೂರು ಅವರಿಗೆ ಹೇಗೆ ದೊರೆಯಿತು? ಇವರಿಗೆ ಈ ಉಗುರನ್ನು ಕೊಟ್ಟಿದ್ಯಾರು? ಹುಲಿಯನ್ನು ಕೊಂದು ಅಥವಾ ಹುಲಿಯನ್ನು ಬೇಟೆಯಾಡಿ ಈ ಉಗುರು ತಂದಿದ್ದಾರಾ? ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

“ಸುಮಾರು 3-4 ವರ್ಷಗಳ ಹಿಂದೆ ವರ್ತೂರು ಸಂತೋಷ್ ಅವರು ತಮಿಳುನಾಡಿಗೆ ಹೋಗಿದ್ದಾಗ ಹೊಸೂರು-ಧರ್ಮಪುರಿ ನಡುವೆ ಯಾವುದೋ ಒಂದು ಭಾಗದಲ್ಲಿ ಹುಲಿ ಉಗುರನ್ನು ತೆಗೆದುಕೊಂಡಿದ್ದಾರೆ. ಅಸಲಿಗೆ ಹುಲಿ ಉಗುರಿನ ಪೆಂಡೆಂಟ್ ಬಳಸುವುದು, ಧರಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅಪರಾಧ ಎಂಬುವುದು ಸಂತೋಷ್ ಅವರಿಗೆ ಗೊತ್ತಿರಲಿಲ್ಲ. ಸಂತೋಷ್ ಅವರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ” ಎಂದು ಸಂತೋಷ್ ಪರ ವಕೀಲ ನಟರಾಜ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X