ಬೆಂಗಳೂರು | ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ ಚಾಲಕನಿಗೆ ಥಳಿಸಿದ ಸಾರ್ವಜನಿಕರು

Date:

Advertisements

ಅ.23ರ ತಡರಾತ್ರಿ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಕಾರು ಚಾಲಕನೊಬ್ಬನಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿದ ಚಾಲಕನನ್ನು ವಾಸು ಎಂದು ಗುರುತಿಸಲಾಗಿದೆ.

ವೃದ್ಧ ದಂಪತಿಗೆ ಸೇರಿದ ಕಾರಿನ ಚಾಲಕನಾಗಿ ವಾಸು ಕೆಲಸ ಮಾಡುತ್ತಿದ್ದನು. ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದಾಗ ಮದ್ಯದ ಅಮಲಿನಲ್ಲಿದ್ದ ಕಾರು ಚಾಲಕ ಅಪಘಾತ ಎಸಗಿದ್ದಾನೆ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

Advertisements

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ವಾಸು, ಮೂರು ದ್ವಿಚಕ್ರ ವಾಹನ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ಸಂಭವಿಸಿದ ಬಳಿಕ ಸಾರ್ವಜನಿಕರು ಕಾರು ಚಲಾಯಿಸಿದ ವ್ಯಕ್ತಿಯನ್ನು ತಡೆದು ವಿಚಾರಿಸಿದಾಗ, ಆತ ಮದ್ಯದ ಅಮಲಿನಲ್ಲಿ ವಾಹನ ಚಾಲನೆ ಮಾಡಿರುವುದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಅಗ್ನಿ ಅವಘಡ ಪರಿಶೀಲನೆ; ಇಲ್ಲಿಯವರೆಗೂ 48 ರೆಸ್ಟೋರೆಂಟ್‌ ಬಂದ್​

ಕಾರು ಚಾಲಕನ ಈ ಕೃತ್ಯವನ್ನು ಕಂಡ ಸಾರ್ವಜನಿಕರು ಸಿಟ್ಟಿಗೆದ್ದು, ಕಾರು ಚಾಲಕ ವಾಸುಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ, ಆತನನ್ನು ಮೈಕೋಲೇಔಟ್ ಸಂಚಾರ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X