ಮೈಸೂರು | ದಸರಾ ವಿರುದ್ಧ ಪ್ರತಿಭಟನೆ; ಹೆದ್ದಾರಿ ತಡೆಗೆ ಮುಂದಾದ ರೈತರ ಬಂಧನ

Date:

Advertisements

ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಮುನ್ನೆಚ್ವರಿಕೆ ಕ್ರಮವಾಗಿ ಪೊಲೀಸರು ಬಂಧಿಸಿದ್ದು ಸಿಎಆರ್ ಮೈದಾನಕ್ಕೆ ಕರೆದೊಯ್ದಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, “ರಾಜ್ಯದಲ್ಲಿ ಬರ ಆವತಿಸಿದ್ದರೂ ಸರ್ಕಾರದ ಮಂತ್ರಿಗಳು ದಸರಾ ಆಚರಣೆ ಮಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದಾರೆ. ದಸರಾ ಎಂದರೆ ಸಂತೃಪ್ತಿ, ಸಂಭ್ರಮದಿಂದ ಕೂಡಿರಬೇಕು. ಆದರೆ, ರೈತರು ಸಂಕಷ್ಟದಲ್ಲಿದ್ದಾರೆ. ಸೂತಕದ ನಡುವೆ ದಸರಾ ಆಚರಣೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

Advertisements

“ರಾಜ್ಯದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳು ಬತಪೀಡಿತವಾಗಿವೆ. ರೈತರಿಗೆ ಪರಿಹಾರ ಕೊಡಲು ಸರ್ಕಾರ ಇನ್ನೂ ಮುಂದಾಗಿಲ್ಲ. ಆ ಬಗ್ಗೆ ಗಮನ ಹರಿಸಿಲ್ಲ. ಹೆದ್ದಾರಿ ಬಂದ್ ಮಾಡುವ ಬಗ್ಗೆ ನಾಲ್ಕು ದಿನಗಳ ಹಿಂದೆಯೇ ಅಧಿಕಾರಿಗಳಿಗೆ ತಿಳಿಸಿದ್ದೇವೆ. ರಾಜ್ಯದ ಹಲವು ಸಚಿವರು ಮೈಸೂರಿನಲ್ಲಿಯೇ ಇದ್ದಾರೆ. ಆದರೂ, ರೈತರ ಅಳಲು ಕೇಳಲು ಅವರಾರು ಬಂದಿಲ್ಲ. ರೈತರನ್ನು ಸಚಿವರು ಮತ್ತು ಸರ್ಕಾರ ನಿರ್ಲಕ್ಷ್ಯಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X