ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕಡಂದೇಲು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ₹24 ಲಕ್ಷ, ಕೆದಿಲ ಗ್ರಾಮದ ಭಗವಂತಕೋಡಿ ಮುರುರ ಪಾಟ್ರುಕೋಡಿಗೆ ₹17 ಲಕ್ಷ, ಕೊಳ್ಳಿಗೆ ಗ್ರಾಮದ ಪರ್ಲಂಪಾಡಿ ಕಣಿಯಾರು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹8 ಲಕ್ಷ, ಕೊಳ್ತಿಗೆ ಗ್ರಾಮದ ಬೈಲೋಡಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ ₹6 ಲಕ್ಷ, ಕೆದಂಬಾಡಿ ಗ್ರಾಮದ ನಿಡ್ಯಾಣ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ, ಬಲ್ನಾಡು ಗ್ರಾಮದ ಸಾರ್ಯ ಕೋಡಿಯಡ್ಕ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್ ಆದೇಶ
ಆರ್ಯಾಪು ಗ್ರಾಮದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆಗೆ ₹15 ಲಕ್ಷ, ಬಂಟ್ವಾಳ ತಾಲೂಕು ಬಿಳಿಯಾರು ಗ್ರಾಮದ ಪೆಜಿಕುಡೆಗುಂಡಿ ರಸ್ತೆಗೆ ₹10 ಲಕ್ಷ, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದ ರಸ್ತೆಗೆ ₹15 ಲಕ್ಷ, ಪುತ್ತೂರು ತಾಲೂಕು 34-ನೆಕ್ಕಿಲಾಡಿ ದರ್ಬೆ ಕಟ್ಟೆಯ ಬಳಿ ಇರುವ ರಸ್ತೆ ಕಾಂಕ್ರಿಟಿಕರಣಕ್ಕೆ ₹5 ಲಕ್ಷ, ಕೊಡಿಂಬಾಡಿ ಗ್ರಾಮದ ಕಲ್ಪನೆ-ಪಿಲಿಗುಂಡ ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕು -ಬದಿನಾರು ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪಾಡಿ ಗ್ರಾಮದ ಕಠಾರ ಕೊಡಿಮಾರ ರಸ್ತೆಗೆ ₹10 ಲಕ್ಷ, ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪಾಲೆದ ಕೋಡಿ ಕೂಡ್ಲೆ ರಸ್ತೆಗೆ ₹10 ಲಕ್ಷ ಹಾಗೂ ಕೊಡಿಂಬಾಡಿ ಗ್ರಾಮದ-ಕಜೆ-ಬೆಳ್ಳಿಪ್ಪಾಡಿ ರಸ್ತೆಗೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ಪ್ರಕಟಣೆಗೆ ತಿಳಿಸಿದ್ದಾರೆ.