ಕಾಂಗ್ರೆಸ್‌ಗೂ ಬಂತು ಹೆಸರು ಬದಲಿಸುವ ಖಯಾಲಿ; ವಿಜಯಪುರ ಮರುನಾಮಕರಣಕ್ಕೆ ಮುಂದಾದ ಸರ್ಕಾರ

Date:

Advertisements

2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಿಸಿದ ವಚನ ಚಳುವಳಿಯ ನೇತಾರ ಬಸವಣ್ಣನವರ ಹೆಸರನ್ನು ವಿಜಯಪುರಕ್ಕೆ ಮರುನಾಮಕರಣ ಸರ್ಕಾರ ಚಿಂತಿಸುತ್ತಿದೆ.

ಜಿಲ್ಲೆಯ ಹೆಸರು ಬದಲಿಸುವ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವಣ್ಣನವರ ಹೆಸರನ್ನು ಜಿಲ್ಲೆಗೆ ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಬಸವಣ್ಣನವರ ಕೊಡುಗೆಗಳನ್ನು ಪರಿಗಣಿಸಿ ಸರ್ಕಾರವು ಜಿಲ್ಲೆಯನ್ನು ‘ಬಸವೇಶ್ವರ ಜಿಲ್ಲೆ’ ಅಥವಾ ‘ಬಸವ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಬಯಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಚುನಾಯಿತ ಪ್ರತಿನಿಧಿಗಳು, ಗಣ್ಯರು, ಎನ್‌ಜಿಒಗಳು ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. 15 ದಿನಗಳೊಳಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

Advertisements

ಜಿಲ್ಲೆಗೆ ಮತ್ತೆ ಮರುನಾಮಕರಣ ಮಾಡುವ ವಿಚಾರವನ್ನು ಬೆಂಬಲಿಸುವುದಿಲ್ಲ ದಲಿತ ಸಮುದಾಯದ ಕೆಲವರು ಸೇರಿದಂತೆ ಹಲವು ಮುಖಂಡರು, ಇತಿಹಾಸಕಾರರು ಎಂದು ಹೇಳಿದ್ದಾರೆ. ಹೆಸರು ಬದಲಿಸುವ ಪ್ರಕ್ರಿಯೆ ಅನಗತ್ಯ. ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವ ಬದಲು ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರೆಲ್ಲರೂ ಹೇಳುತ್ತಿದ್ದಾರೆ.

“ಜಿಲ್ಲೆಯ ಹೆಸರನ್ನು ಮತ್ತೆ ಮರುನಾಮಕರಣ ಮಾಡುವ ಅಗತ್ಯವಿಲ್ಲ….” ಎಂದು ಇತಿಹಾಸಕಾರ, ಲೇಖಕ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣ ಕೊಲ್ಹಾರ ಕುಲಕರ್ಣಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಶೋಭಕ್ಕ ಅಥವಾ ವಿಜಯೇಂದ್ರ – ಯಾರು ಹಿತವರು ಈ ಸಂದಿಗ್ಧದೊಳಗೆ?

“ಬಿಜಾಪುರ ಹೆಸರನ್ನು ವಿಜಯಪುರ ಎಂದು ಬದಲಾಯಿಸುವ ಸರ್ಕಾರದ ನಿರ್ಧಾರವನ್ನು ನಾನು ವಿರೋಧಿಸಿದ್ದೆ. ಮೂರು ಶತಮಾನಗಳಿಂದ ಈ ಪ್ರದೇಶವನ್ನು ಬಿಜಾಪುರ ಎಂದು ಗುರುತಿಸಲಾಗಿದೆ. ವಿನಾಕಾರಣ ವಿಜಯಪುರ ಎಂದು ಹೆಸರು ಬದಲಿಸಲಾಗಿದೆ. ಸರ್ಕಾರವು ಜಿಲ್ಲೆಯ ಹೆಸರನ್ನು ಮತ್ತೆ ಬದಲಾಯಿಸಲು ಬಯಸಿದೆ, ಇದು ಅಪ್ರಾಯೋಗಿಕ” ಎಂದು ಅವರು ವಿರೋಧಿಸಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

“ಬಸವಣ್ಣ ಹುಟ್ಟಿದ ಬಸವನಬಾಗೇವಾಡಿ ತಾಲೂಕನ್ನು ಅಭಿವೃದ್ಧಿ ಪಡಿಸಬಹುದು. ಅವರ ಹೆಸರಲ್ಲಿ ಈಗಾಗಲೇ ‘ಬಸವ ಎಕ್ಸ್‌ಪ್ರೆಸ್’ ರೈಲು ಇದ್ದು, ಇಲ್ಲಿನ ಹೊಸ ವಿಮಾನ ನಿಲ್ದಾಣಕ್ಕೆ ಬಸವಣ್ಣನವರ ಹೆಸರಿಡುವ ಪ್ರಸ್ತಾವನೆ ಇದೆ. ಹೀಗಾಗಿ, ಮತ್ತೆ ಜಿಲ್ಲೆಯ ಹೆಸರನ್ನು ಬದಲಾಯಿಸುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X