ಧಾರವಾಡ | ಅಸೂಯೆಯಿಂದ ಹತ್ತಿ ಬೆಳೆಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು

Date:

Advertisements

ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಸಿಂಪಡಿಸಿ ಬೆಳೆ ನಾಶ ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ.

ಗಂಗಪ್ಪ ಬಾರ್ಕಿ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ನೀರಿಗೆ ಬರವಿದ್ದರೂ, ಈ ರೈತ ನೀರು ಹಾಯಿಸಿ ಹತ್ತಿ ಬೆಳೆದಿದ್ದರು. ಸೊಂಪಾಗಿ ಬೆಳೆದ ಹತ್ತಿಯ ಫಸಲು ಇನ್ನೇನು ಕೈಸೇರಬೇಕು ಎನ್ನುವಷ್ಟರಲ್ಲಿ ಕಿಡಿಗೇಡಿಗಳು ರಾತ್ರೋರಾತ್ರಿ ಹತ್ತಿ ಬೆಳೆಗೆ ಕಳೆನಾಶಕ ಹೊಡೆದಿದ್ದಾರೆ. ಇದರಿಂದಾಗಿ ಈಗ ಬೆಳೆಯೆಲ್ಲ ಒಣಗುತ್ತಿದೆ.

ಬೆಳೆ ನಾಶವಾಗಿರುವ ಬಗ್ಗೆ ನೋವು ಹಂಚಿಕೊಂಡ ರೈತ ಗಂಗಪ್ಪ ಬಾರ್ಕಿ,ʼಚೆನ್ನಾಗಿದ್ದ ಬೆಳೆ ಏಕಾಏಕಿ ಒಣಗುತ್ತಿರುವುದನ್ನು ಕಂಡು ಬೆಳೆಗೆ ರೋಗ ಬಂದಿದೆಯಾ ಎಂಬ ಸಂಶಯದಿಂದ ಔಷಧಿ ಅಂಗಡಿಗೆ ತೋರಿಸಿಕೊಂಡು ಬಂದಿದ್ದೇವೆ. ಕೃಷಿ ಕಾಲೇಜಿನವರೂ ಬಂದು ಪರೀಕ್ಷೆ ಮಾಡಿ ಹೋಗಿದ್ದಾರೆ. ಬೆಳೆಗೆ ಯಾವುದೇ ರೋಗ ಬಂದಿಲ್ಲ. ಕಳೆನಾಶಕ ಸಿಂಪಡನೆ ಆಗಿದೆ ಎಂದು ಅವರೆಲ್ಲರೂ ಹೇಳಿದ್ದಾರೆ. ಯಾರು ಹೀಗೆ ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಗೊತ್ತಿಲ್ಲ,ʼ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

Advertisements

ರೈತ ಒಂದು ಎಕರೆಯಲ್ಲಿ ಒಂದೂವರೆ ಲಕ್ಷ ಖರ್ಚು ಮಾಡಿ ಟೊಮೆಟೊ ಬೆಳೆದಿದ್ದರು. ಮೊದಲ ಬೆಳೆಯಲ್ಲಿ ಒಂದು ಲಕ್ಷ ನಷ್ಟವಾಗಿತ್ತು. ಆದರೆ, ನಂತರ ಗಿಡಗಳು ಚಿಗುರೊಡೆದು 15ಲಕ್ಷ ರೂ ಲಾಭ ಬಂದಿತ್ತು. ಅದಕ್ಕೆ ಯಾರೋ ಹೊಟ್ಟೆಕಿಚ್ಚಲ್ಲಿ ಈ ರೀತಿ ಮಾಡಿರಬಹುದು ಎಂದು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಯಾವುದೋ ಹಳೆಯ ದ್ವೇಷಕ್ಕೆ, ರಾತ್ರೋರಾತ್ರಿ ಕಳೆ ನಾಶಕ ಹೊಡೆದು ಯಾರೋ ಕಿಡಿಗೇಡಿಗಳು ಹೀಗೆ ಮಾಡಿರಬಹುದು ಅಥವಾ ಹೊಟ್ಟೆ ಕಿಚ್ಚಿನಿಂದ ಹೀಗೆ ಮಾಡಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X