ತಂಪಾದ ಬೆಂಗಳೂರು | 10 ವರ್ಷದ ಬಳಿಕ ಅತ್ಯಂತ ಕಡಿಮೆ ತಾಪಮಾನ ದಾಖಲು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ ಸಂಜೆಯಾದರೆ, ಚಳಿಯ ವಾತಾವರಣ ಉಂಟಾಗುತ್ತಿದೆ. ಇದು ಚಳಿಗಾಲದ ಆರಂಭದ ಮುನ್ಸೂಚನೆಯನ್ನು ನೀಡುತ್ತಿದೆ.

ಕಳೆದ 2013ರಲ್ಲಿ ದಾಖಲಾಗಿದ್ದ ಚಳಿಯ ವಾತಾವರಣದ ಮಾದರಿಯಲ್ಲಿಯೇ ವರ್ಷವೂ ಹೆಚ್ಚಿನ ಚಳಿಯ ವಾತಾವರಣ ಅಕ್ಟೋಬರ್ನಲ್ಲಿಯೇ ಶುರುವಾಗಿದೆ. ಆದರೆ, ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆ ಬಿದ್ದಿಲ್ಲ. ರಾಜ್ಯದ ಹಲವೆಡೆ ಮಳೆ ಕೊರತೆ ಎದುರಾಗಿದೆ. ಜಲಾಶಯಗಳು ನೀರಿನಿಂದ ಭರ್ತಿಯಾಗಿಲ್ಲ. ಈ ವರ್ಷ ಭೀಕರ ಬರಗಾಲ ಎದುರಾಗಿದೆ. ರಾಜ್ಯ ಸರ್ಕಾರ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ಇದೀಗ, ಮುಂಗಾರು ಮಳೆಯ ಅವಧಿ ಮುಗಿದು ಹಿಂಗಾರು ಮಳೆ ಆರಂಭವಾಗಿದೆ. ಮಳೆ ಬೀಳುವ ಸಮಯದಲ್ಲಿಯೇ ಚಳಿ ಆರಂಭವಾಗಿದೆ.

ಈಶಾನ್ಯ ಗಾಳಿ ಆರಂಭ ಆಗಿರುವುದನ್ನು ಹವಾಮಾನ ಇಲಾಖೆ ಅಧಿಕೃತಗೊಳಿಸದಿದ್ದರೂ, ಬೆಂಗಳೂರಿನಲ್ಲಿ ಚಳಿ ವಾತಾವರಣ ಶುರುವಾಗಿದೆ.

Advertisements

“2014 ಅಕ್ಟೋಬರ್ 31ರಂದು ತಾಪಮಾನವು 17.5 ಡಿಗ್ರಿ ಸೆಲ್ಸಿಯಸ್​​ಗೆ ಇಳಿದಿತ್ತು. ಬಳಿಕ, 2023 ಅಕ್ಟೋಬರ್​ 24 ರಂದು 17.1 ಡಿಗ್ರಿ ಸೆಲ್ಸಿಯಸ್ತಾಪಮಾನ ದಾಖಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.

“ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ” ಎಂದು ಮಾಹಿತಿ ನೀಡಿದೆ.

ಬಾರಿ ಹೆಚ್ಚು ಮಳೆಯಾಗದೇ ಇದ್ದರೂ ಬೆಂಗಳೂರಿನಲ್ಲಿ ಮಂಗಳವಾರದಂದು ಅಕ್ಟೋಬರ್ನಲ್ಲಿ ಅತಿ ಹೆಚ್ಚು ಚಳಿಯನ್ನು ಕಂಡಿದೆ. ಇನ್ನು ಅಕ್ಟೋಬರ್ 18 ಅನ್ನು ಹೊರತುಪಡಿಸಿದರೆ, ಅಕ್ಟೋಬರ್ನಲ್ಲಿ ಉಳಿದ ದಿನಗಳಲ್ಲಿ ಬೆಳಗ್ಗೆ ತಾಪಮಾನ 18.6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕ್ರಮೇಣ 19 ಮತ್ತು 21 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ಇರುತ್ತದೆ. ಹೀಗಾಗಿ, ನಗರದಲ್ಲಿ ಮಂಗಳವಾರ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದು ಒಂದು ರೀತಿಯಲ್ಲಿ ಆಶ್ಚರ್ಯ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲ್ಟಿಪ್ಲೆಕ್ಸ್ ಗೋಲ್ಡ್‌ ಕಾರ್ಡ್‌ ಆಸೆಗೆ ಬಿದ್ದು ₹1 ಲಕ್ಷ ಕಳೆದುಕೊಂಡ ವ್ಯಕ್ತಿ

ಕಡಿಮೆ ತಾಪಮಾನ ಚಳಿಯನ್ನು ಸೂಚಿಸಿದರೆ, ಗರಿಷ್ಠ ತಾಪಮಾನ ಅತ್ಯಂತ ಬಿಸಿಯನ್ನು ಸೂಚಿಸುತ್ತದೆ.

“ಅಕ್ಟೋಬರ್ ತಿಂಗಳಲ್ಲಿ ಇದು ಕನಿಷ್ಠ ತಾಪಮಾನವಾಗಿದೆ. ನವೆಂಬರ್ ಕೊನೆಯ ವಾರದಿಂದ ನಗರದಲ್ಲಿ ಚಳಿಗಾಲದ ಪರಿಣಾಮವ ಬೀರುವ ಸಾಧ್ಯತೆಯಿದೆ. ಎಲ್ ನಿನೋ ಪ್ರಭಾವದಿಂದಾಗಿ ಕಳೆದ ವರ್ಷದಂತೆ ಕಠಿಣ ಚಳಿಗಾಲದ ಸಂಭವನೀಯತೆ ವರ್ಷ ತುಂಬಾ ಕಡಿಮೆಯಾಗಿದೆ. ನವೆಂಬರ್ನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X