ಪ್ರಧಾನಿಗಳೇ, ಜಾತೀಯತೆಯನ್ನು ಹೇಗೆ ತೊಡೆದು ಹಾಕಬೇಕೆಂದು ಸ್ವಲ್ಪ ವಿವರಿಸುವಿರಾ? ಸಿದ್ದರಾಮಯ್ಯ

Date:

Advertisements

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ಸನ್ಮಾನ್ಯ ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ. ಆದರೆ ಅದನ್ನು ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ಥಳುಕು ಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನ ಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಸಿಎಂ ಆಗ್ರಹಿಸಿದ್ದಾರೆ.

Advertisements

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದು ಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗ ತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದು ಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X