ಟಿವಿ ನೇರ ಪ್ರಸಾರದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಬಿಆರ್‌ಎಸ್ ಶಾಸಕ!

Date:

Advertisements

ತೆಲಂಗಾಣದ ವಿಧಾನಸಭಾ ಚುನಾವಣಾ ರಣಾಂಗಣ ದಿನದಿನವೂ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ವಿರೋಧಿಗಳ ವಿರುದ್ಧ ದಾಳಿಯನ್ನು ಹೆಚ್ಚಿಸುತ್ತಿವೆ. ಈ ನಡುವೆ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು ಬಿಜೆಪಿ ಅಭ್ಯರ್ಥಿಯೊಬ್ಬನ ಮೇಲೆ ಟಿವಿ ನೇರ ಪ್ರಸಾರ ಕಾರ್ಯಕ್ರಮವೊಂದರಲ್ಲಿ ಹಲ್ಲೆ ನಡೆಸಿದ ಘಟನೆ ಹೈದರಾಬಾದ್‌ ನಗರದಲ್ಲಿ ನಡೆದಿದೆ.

ಬುಧವಾರ(ಅ.25) ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ ಪಿ ವಿವೇಕಾನಂದ ಅವರು ಪ್ರಸ್ತುತ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಶ್ರೀಶೈಲಂ ಗೌಡ್‌ ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ಮತ್ತು ವಾಹಿನಿಯ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳವನ್ನು ಬಿಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

ತೆಲಂಗಾಣ ವಿಧಾನಸಭಾ ಚುನಾವಣೆಯ ವಿಷಯಗಳ ಕುರಿತು ಚರ್ಚಿಸಲು ಕಾರ್ಯಕ್ರಮವನ್ನು ಹೈದರಾಬಾದ್‌ ನಗರದಲ್ಲಿ ಆಯೋಜಿಸಲಾಗಿತ್ತು. ತೆಲಂಗಾಣ ರಾಜ್ಯದಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಕೋರ್ಟ್‌ನಲ್ಲಿ ನ್ಯಾಯಾಧೀಶೆಯನ್ನು ನಿಂದಿಸಿದ ನ್ಯಾಯಾಧೀಶ; 2 ದಿನಗಳ ಬಳಿಕ ಕ್ಷಮೆಯಾಚಿಸಿದ ಜಡ್ಜ್‌

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷದ ಅಭ್ಯರ್ಥಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಜಗಳವಾಡಿದ ಘಟನೆ ಆಘಾತಕಾರಿಯಾಗಿದೆ. ಬಿಆರ್‌ಎಸ್ ಮತ್ತೆ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂದು ಊಹಿಸಿ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಬಗ್ಗೆ ಸಮರ್ಥಿಸಿಕೊಂಡಿರುವ ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು, “ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು. ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು. ಶಾಸಕರು ಕೂಡ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X