ವಿಜಯಪುರ | ಹುಲಿ ಉಗುರು ಪ್ರಕರಣ: ಬಿಜೆಪಿ ಮುಖಂಡ ಮನೆಯಲ್ಲಿ ಶೋಧ

Date:

Advertisements

ಸದ್ಯ ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಹಲವೆಡೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ, ತನಿಖೆ ನಡೆಸುತ್ತಿದ್ದಾರೆ. ಗುರುವಾರ ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಬಬಲೇಶ್ವರದಲ್ಲಿರುವ ವಿಜುಗೌಡ ಪಾಟೀಲ್‌ ಅವರ ಮನೆಗೆ  ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿದೆ. ವಿಜುಗೌಡ ಪಾಟೀಲ್ ಅವರ ಪುತ್ರ ಶಾಶ್ವತಗೌಡ ರದ್ದು ಎನ್ನಲಾದ ಹುಲಿ ಉಗುರು ಹೋಲುವ ಚಿನ್ನದ ಲಾಕೆಟ್‌ಅನ್ನು ಪರಿಶೀಲಿಸಿದ್ದಾರೆ.

ಇತ್ತೀಚಿಗೆ, ಶಾಶ್ವತಗೌಡ ಪಾಟೀಲ ಪೆಂಡೆಂಟ್​ನಲ್ಲಿ ಹುಲಿ ಉಗುರು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Advertisements

ಹುಲಿ ಉಗುರು ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿಜುಗೌಡ, “ಅದು ಹಳೆಯ ಲಾಕೆಟ್. ವಾಸ್ತು ನಂಬಿಕೆಯಿಂದಾಗಿ ಈ ಹಿಂದೆ ಶಾಶ್ವತಗೌಡ ಅದನ್ನು ಧರಿಸುತ್ತಿದ್ದರು. ಈಗ ಅದನ್ನು ಬಳಸುತ್ತಿಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X