ಬೆಂಗಳೂರು | ವಿಭೂತಿಪುರ ಕೆರೆಯ ಸುತ್ತ ಸಿಸಿಟಿವಿ ಮತ್ತು ಬ್ಯಾರಿಕೇಡ್ ಅಳವಡಿಸಲು ನಿವಾಸಿಗಳ ಒತ್ತಾಯ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಎಚ್‌ಎಎಲ್‌ ಬಳಿ ಇರುವ ವಿಭೂತಿಪುರ ಕೆರೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಹಿಂದೆ ವಿಭೂತಿಪುರ ಕೆರೆಯಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ಮುಳುಗಿ ಸಾವನ್ನಪ್ಪಿದರು. ಈ ಘಟನೆಯ ಬಳಿಕ ಕೆರೆಯ ಸುತ್ತಮುತ್ತ ಸಿಸಿಟಿವಿ ಮತ್ತು ಬ್ಯಾರಿಕೇಡ್ ಹಾಕುವಂತೆ ತಲಕಾವೇರಿ ಲೇಔಟ್, ಬೃಂದಾವನ ಲೇಔಟ್, ವೀರಭದ್ರ ಲೇಔಟ್, ಅನ್ನಸಂದ್ಯಾಪಾಳ್ಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಐದು ವರ್ಷಗಳಲ್ಲಿ ಇಬ್ಬರು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 45 ಎಕರೆ ಪ್ರದೇಶದಲ್ಲಿರುವ ಈ ಕೆರೆಯ ಸುತ್ತ ಹೆಚ್ಚುವರಿ ಭದ್ರತೆ ಸಿಬ್ಬಂದಿ ನೇಮಕ ಮಾಡುವಂತೆ ಒತ್ತಾಯ ಮಾಡಿದ್ದಾರೆ.

Advertisements

ವಿಭೂತಿಪುರ ಕೆರೆಸಂರಕ್ಷಣಾ ಸಮಿತಿಯ ಸದಸ್ಯೆ ಸತ್ಯವಾಣಿ ಶ್ರೀಧರ್ ಮಾತನಾಡಿ, “ಕೆರೆಯ ಅಭಿವೃದ್ಧಿಗೆ ಈ ಹಿಂದೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದರೂ, ಸುರಕ್ಷತೆಯ ಬಗ್ಗೆ ಕಾಳಜಿ ಇಲ್ಲದಂತಾಗಿದೆ. ಕೆರೆಯ ಸುತ್ತಮುತ್ತ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಕೆರೆಯ ಸುತ್ತ ಹಾಕಲಾಗಿದ್ದ ಬೇಲಿ ಮುರಿದು ಹೋದ ಕಾರಣ ಜಾನುವಾರುಗಳು ಕೆರೆಗೆ ಸುಲಭವಾಗಿ ಹೋಗುವಂತಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎನ್‌ಸಿಇಆರ್‌ಟಿ: ಶಿಕ್ಷಣತಜ್ಞ ನಿರಂಜನಾರಾಧ್ಯ ಆರೋಪ

“ಈ ಹಿಂದೆ ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆಗಳು ವರದಿಯಾಗುತ್ತಿದ್ದವು. ಇದೀಗ ಮತ್ತೊಂದು ಘಟನೆ ವರದಿಯಾಗಿದೆ. ಹುಡುಗರು ಮತ್ತು ಮಾದಕ ವ್ಯಸನಿಗಳು ಕೆರೆ ಪ್ರದೇಶದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾರೆ. ಕೆರೆಯ ಅಧಿಕಾರಿಗಳು ಮತ್ತು ಪೊಲೀಸರು ನಿಯಮಿತವಾಗಿ ಕ್ರಮಕೈಗೊಳ್ಳಬೇಕೇ ಹೊರತು ಘಟನೆ ಸಂಭವಿಸಿದಾಗ ಅಥವಾ ಯಾರಾದರೂ ದೂರು ನೀಡಿದಾಗಲ್ಲ” ಎಂದು ಹೇಳಿದರು.

“ಇದಲ್ಲದೇ ಮಾಂತ್ರಿಕರು ಅಥವಾ ಶಾಸ್ತ್ರಗಳನ್ನು ನೆರವೇರಿಸಿ ಕೆರೆಯ ಬಳಿಗೆ ಬಂದು ಹೂವು, ತೆಂಗಿನಕಾಯಿ, ವೀಳ್ಯದೆಲೆ ಎಸೆದ ಘಟನೆಗಳೂ ನಡೆದಿವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X