ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮದ್ದಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಭಾಗವಾಗಿ ಇದೀಗ 718 ಮೀಟರ್ ಸುರಂಗ ಮಾರ್ಗ ಕೊರೆದು ರುದ್ರ ಹೆಸರಿನ ಸುರಂಗ ಕೊರೆಯುವ ಯಂತ್ರ ಯಶಸ್ವಿಯಾಗಿ ಹೊರಬಂದಿದೆ.

ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ರುದ್ರ ಎಂಬ ಹೆಸರಿನ ಟಿಬಿಎಂ ಲಕ್ಕಸಂದ್ರ ನಿಲ್ದಾಣದಿಂದ ಜು.14 ರಂದು ಸುರಂಗ ಕೊರೆಯುವ ಕಾಮಗಾರಿ ಆರಂಭಿಸಿತ್ತು. ಲಕ್ಕಸಂದ್ರ ನಿಲ್ದಾಣದಿಂದ ಲ್ಯಾಂಗ್ಫೋರ್ಡ್ಟೌನ್ ನಿಲ್ದಾಣದವರೆಗೆ ಬರೋಬ್ಬರಿ 718 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಅ.26 ರಂದು ಹೊರಬಂದಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ರುದ್ರ ಟಿಬಿಎಂ ಬರೋಬ್ಬರಿ 100 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಸಂಪೂರ್ಣವಾಗಿ ಸುರಂಗ ಕೊರೆದು ಹೊರಬಂದಿದೆ. ಲಕ್ಕಸಂದ್ರದಿಂದ ಲ್ಯಾಂಗ್ ಫೋರ್ಡ್ ವರೆಗೆ ಎರಡನೇ ಹಂತದ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ನಡೆಯುತ್ತಿದೆ. ಎರಡನೇ ಹಂತದ ಕಾಮಗಾರಿಯಲ್ಲಿ ಇದು ಏಳನೇ ಟಿಬಿಎಂ ಕಾರ್ಯಾಚರಣೆಯಾಗಿದೆ ಎಂದು ಮಾಹಿತಿ ನೀಡಿದೆ.

Advertisements

ವಮಿಕಾ ಹೆಸರಿನ ಸುರಂಗ ಕೊರೆಯುವ ಯಂತ್ರ ಕಳೆದ ತಿಂಗಳು ಆಗಸ್ಟ್ನಲ್ಲಿ ಕಾಳೇನ ಅಗ್ರಹಾರನಾಗವಾರ ಗುಲಾಬಿ ಮಾರ್ಗದಲ್ಲಿ 721 ಮೀಟರ್ಮೆಟ್ರೋ ಸುರಂಗ ಕೊರೆದು ಹೊರ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

ಹಿಂದೆ ಟಿಬಿಎಂ ಯಂತ್ರವು ಸೌತ್ ರ‍್ಯಾಂಪ್ ಮತ್ತು ಡೈರಿ ಸರ್ಕಲ್ ನಿಲ್ದಾಣದ ಮಧ್ಯೆ ಒಟ್ಟು 613.2 ಮೀಟರ್ ಸುರಂಗ ಕೊರೆದಿತ್ತು. ನಂತರ ಡೇರಿ ವೃತ್ತದ ನಿಲ್ದಾಣದಿಂದ ಲಕ್ಕಸಂದ್ರ ಮೆಟ್ರೋ ನಿಲ್ದಾಣದ ಮಧ್ಯದವರೆಗಿನ 746.2 ಮೀಟರ್ಉದ್ದದ ಸುರಂಗ ಕೊರೆದು ಟಿಬಿಎಂ ಯಶಸ್ವಿಯಾಗಿ ಹೊರಬಂದಿತ್ತು ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X