ಕರ್ನಾಟಕ ನಾಮಕರಣಕ್ಕೆ 50 ವರ್ಷ; ವರ್ಷಪೂರ್ತಿ ಕನ್ನಡ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

Date:

Advertisements
  • 2024ರ ನವೆಂಬರ್ 30ರ ವರೆಗೆ ಕನ್ನಡ ಕಾರ್ಯಕ್ರಮ ಆಯೋಜನೆ
  • ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲ ಜಿಲ್ಲೆಗಳಲ್ಲಿ ಸಂಚಾರ

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾಹಿತಿ ಹಂಚಿಕೊಂಡ ಅವರು, “ಈ ವರ್ಷದ ನವೆಂಬರ್ 1ರಿಂದ‌ ಮುಂದಿನ‌ ವರ್ಷ 2024ರ ನವೆಂಬರ್ 30ರ ವರೆಗೆ ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು” ಎಂದರು.

“ನವೆಂಬರ್ 1ರಂದು ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕನ್ನಡ ಧ್ವಜಾರೋಹಣ ನೆರವೇರಿಸುತ್ತಾರೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಶಾಸಕರು ಕನ್ನಡ ಧ್ವಜ ವಂದನೆ ನೆರವೇರಿಸಲಿದ್ದಾರೆ. ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂಭ್ರಮ ಸಡಗರದಿಂದ ನಾಡಧ್ವಜದ ಧ್ವಜಾರೋಹಣ ಕಾರ್ಯಕ್ರಮ ನಡೆಸುವುದು. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ತೊಡಗುವಂತಾಗಬೇಕು” ಎಂದು ಕರೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಐಸ್‌ಲ್ಯಾಂಡ್ ಮಹಿಳೆಯರ ಮುಷ್ಕರದಲ್ಲಿ ಅಡಗಿರುವ ಪಾಠಗಳು

“ನವೆಂಬರ್ 1ರಂದು ರಾಜ್ಯದ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 : ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ ಎನ್ನುವ ಘೋಷ ವಾಕ್ಯವನ್ನು ನಮ್ಮ ತಾಯಂದಿರು ಹಾಗೂ ಸಹೋದರಿಯರು ಬರೆಯಬೇಕು. ಬೆಳಗ್ಗೆ 9 ಗಂಟೆಗೆ ಎಲ್ಲ ರೆಡಿಯೋಗಳಲ್ಲಿ ನಾಡಗೀತೆ ಮೊಳಗಲಿದೆ. ರಾಷ್ಟ್ರಗೀತೆಗೆ ಗೌರವ ಸಮರ್ಪಿಸುವ ಹಾಗೆ ಎಲ್ಲರೂ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ ಮಾಡಬೇಕು. ಸಂಜೆ 5 ಗಂಟೆಗೆ ನಿಮ್ಮ- ನಿಮ್ಮ ಊರುಗಳ ಮೈದಾನಗಳಲ್ಲಿ ಕೆಂಪು- ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿಸಿ. ರಾತ್ರಿ ಏಳು ಗಂಟೆಗೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸಬೇಕು” ಎಂದರು.

“ಕರ್ನಾಟಕ ಏಕೀಕಕರಣದ ವಿಷಯ, ಸಾಹಿತ್ಯ, ಸಾಧನೆಗಳ ಪಥ, ಐತಿಹಾಸಿಕ ನೆಲೆಗಳ ಮಾಹಿತಿ, ಕನ್ನಡ ಜ್ಯೋತಿ, ಭುವನೇಶ್ವರಿ ಪ್ರತಿಮೆ ಸಹಿತ ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಪರಿಚಯ ಮಾಡಿಕೊಡುವ ವಿಶೇಷ ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲಾ 31 ಜಿಲ್ಲೆಗಳ ಸಹಿತ ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರ ಹಾಗೂ ಮತ್ತು ಎಲ್ಲ ಗ್ರಾಮಗಳಲ್ಲೂ ಪರ್ಯಾಟನೆ ನಡೆಸಲಿದೆ. ಇದಕ್ಕೆ‌‌ ಸಂಬಂಧಿಸಿದ ರೂಟ್ ಮ್ಯಾಪ್ ಕೂಡ ಸಿದ್ಧಪಡಿಸಿದ್ದು, ಅದರಂತೆ ರಥಯಾತ್ರೆ ಹಾಗೂ ಜ್ಯೋತಿ ಸಾಗಲಿದೆ. ಅಲ್ಲದೆ, ರಾಜ್ಯಾದ್ಯಂತ ಎಲ್ಲಾ‌ ಶಾಲಾ- ಕಾಲೇಜುಗಳಲ್ಲಿ ನನ್ನ ಭಾಷೆ, ನನ್ನ ಹಾಡು ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ‌ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದು. ರಾಜ್ಯದ ಪ್ರತಿ ಶಾಲೆಗಳು, ವಲಯಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ‌ ಮಟ್ಟ, ನಾಲ್ಕು ಕಂದಾಯ ವಿಭಾಗಗಳು ಮತ್ತು ರಾಜ್ಯ ಮಟ್ಟದಲ್ಲಿ‌ ಸ್ಪರ್ಧೆಗಳು ನಡೆಯಲಿವೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X