ಕಲಬುರಗಿ | ದುಡಿಯುವ ಕೈಗಳಿಗಿಲ್ಲ ವೇತನ; ಸಿದ್ದು ಕೇರೂರ ಕಿಡಿ

Date:

Advertisements

ಪೌರಕಾರ್ಮಿಕರು ಮುಂಜಾನೆಯೇ ಎದ್ದು, ರಸ್ತೆಗಳ ಕಸ-ಕಡ್ಡಿ ಗುಡಿಸಿ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ, ದುಡಿಯುವ ಅವರಿಗೆ ವೇತನವೇ ದೊರೆಯುತ್ತಿಲ್ಲ. ಸುರಕ್ಷಾ ಸಲಕರಣೆಗಳನ್ನೂ ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಸಿದ್ದು ಕೇರೂರ್ ಕಿಡಿಕಾರಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಸುಮಾರು ಒಂದು, ಒಂದೂವರೆ ವರ್ಷಗಳಿಂದ ವೇತನ ನೀಡಲಾಗಿಲ್ಲ. ಬಾಕಿ ವೇತನವನ್ನು ನೀಡಬೇಕು ಮತ್ತು ಇಪಿಎಫ್‌, ಇಎಸ್‌ಐಅನ್ನು ಪಾವತಿಸಬೇಕೆಂದು ಒತ್ತಾಯಿಸಿ ನೌಕರರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಸತ್ಯಾಗ್ರಹವನ್ನು ಬೆಂಬಲಿಸಿ ಅವರು ಮಾತನಾಡಿದರು. “ನಗರವನ್ನು ಸ್ವಚ್ಛಗೊಳಿಸುವ ನೌಕರರ ವೇತನವನ್ನು ಕಸಿದುಕೊಳ್ಳಬಾರದು. ಅವರಿಗೆ ಸುರಕ್ಷತಾ ಕವಚವನ್ನು ಕೊಡದೆ ಅಮಾನುಷವಾಗಿ ದುಡಿಸಿಕೊಳ್ಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಪ್ರತಿಭಟನೆಯಲ್ಲಿ ದಲಿತ ಹಿರಿಯ ಮುಖಂಡ ಚಂದ್ರಶೇಖರ್ ಹರನಾಳ, ಮಲ್ಲಣ್ಣ ಕೊಡಚಿ, ಸಿದ್ದರಾಮ ಕಟ್ಟಿ, ಮದನ್ ಗುಡೂರ್, ಅಬ್ದುಲ್ ಗನಿ, ವಿಶ್ವರಾಧ್ಯ ಗೋಪಾಲ್ಕರ್, ಬಸವರಾಜ್ ಇಂಗಳಗಿ, ಮಲ್ಲಿಕಾರ್ಜುನ ಕೆಲ್ಲೂರ, ರಾಜು ಆಂದೋಲ ಹಾಗೂ ನೌಕರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X