ಗುಜರಾತ್ | ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

Date:

Advertisements

ಗುಜರಾತ್‌ ರಾಜ್ಯದ ಸೂರತ್ ನಗರದ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅದಾಜಾನ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಕುಟುಂಬವು ಆತ್ಮಹತ್ಯೆಗೆ ಶರಣಾಗಿದ್ದು, ಅಲ್ಲಿ ಸಿಕ್ಕಿರುವ ಪತ್ರವೊಂದರಲ್ಲಿ’ಹಣಕಾಸಿನ ಸಂಕಷ್ಟವೇ ನಮ್ಮ ಈ ನಿರ್ಧಾರಕ್ಕೆ ಕಾರಣ” ಎಂದು ಬರೆಯಲಾಗಿದೆ.

ಮೃತರನ್ನು ಮನೆಯ ಯಜಮಾನ ಮನೀಷ್ ಸೋಲಂಕಿ (37), ಆತನ ಪತ್ನಿ, ತಂದೆ-ತಾಯಿ, 6 ವರ್ಷದ ಪುತ್ರ, 10 ಮತ್ತು 13 ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ. ಮನೀಷ್ ಸೋಲಂಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ ಉಳಿದ ಆರು ಮಂದಿ ವಿಷಾಹಾರ ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಶಿಕ್ಷಕರ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು

ಕುಟುಂಬದ ಯಜಮಾನ ಮನೀಷ್ ಸೋಲಂಕಿ ಪೀಠೋಪಕರಣ ಉದ್ಯಮಿಯಾಗಿದ್ದು ಕುಟುಂಬವು ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಗುಜರಾತ್‌ ಸೂರತ್‌ನ ಕಾರ್ಖಾನೆಯಲ್ಲಿ ಸುಮಾರು 35 ಕಾರ್ಮಿಕರನ್ನು ಹೊಂದಿದ್ದ ಕಾರ್ಖಾನೆಯನ್ನು ಸೋಲಂಕಿ ಅವರು ನಡೆಸುತ್ತಿದ್ದರು. ಈ ಕಾರ್ಮಿಕರು ಶನಿವಾರ ಬೆಳಿಗ್ಗೆ ಸೋಲಂಕಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು. ಆದರೆ ಅವರು ಕರೆಗಳಿಗೆ ಉತ್ತರಿಸಲಿಲ್ಲ. ಅಲ್ಲದೆ ಅವರ ಮನೆಯ ಬಾಗಿಲನ್ನು ತೆರೆಯಲಿಲ್ಲ.

ಸ್ಥಳೀಯರು ಮನೆಯ ಹಿಂಬದಿಯ ಕಿಟಕಿ ಒಡೆದು ಮನೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸೋಲಂಕಿ ದೊಡ್ಡ ದೊಡ್ಡ ಒಪ್ಪಂದಗಳನ್ನು ಹೊಂದಿದ್ದರು ಮತ್ತು ದೀರ್ಘಕಾಲದಿಂದ ಕೆಲವು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಕುಟುಂಬದ ಸಂಬಂಧಿಕರು ಯಾವುದೇ ವಿವರ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಸಾವಿಗೆ ನಿಖರ ಕಾರಣವೇನೆಂದು ತನಿಖೆ ನಂತರ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X