ಏಕದಿನ ವಿಶ್ವಕಪ್ 2023 | ಮುಂದುವರೆದ ಭಾರತದ ಗೆಲುವಿನ ಓಟ; ಇಂಡಿಯಾ ಬೌಲರ್ ಗಳ ದಾಳಿಗೆ ಆಂಗ್ಲ ಪಡೆ ಧೂಳೀಪಟ

Date:

Advertisements

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ನಾಗಲೋಟ ಮುಂದುವರೆದಿದೆ. ಕಡಿಮೆ ಮೊತ್ತ ದಾಖಲಿಸಿದ್ದರೂ ಆಂಗ್ಲ ತಂಡವನ್ನು ಟೀಂ ಇಂಡಿಯಾ 129 ರನ್‌ಗಳಿಗೆ ಆಲೌಟ್ ಮಾಡಿ ಸತತ 6ನೇ ಗೆಲುವು ದಾಖಲಿಸಿತು.

ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 230 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜೋಸ್‌ ಬಟ್ಲರ್‌ ನೇತೃತ್ವದ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿ 34.5 ಓವರ್‌ಗಳಲ್ಲಿ 129 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 100 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು.

ಭಾರತದ ಪರ ಮೊಹಮ್ಮದ್ ಶಮಿ 22/4, ಜಸ್‌ಪ್ರೀತ್ ಬೂಮ್ರಾ 32/3, ಕುಲದೀಪ್‌ ಯಾದವ್‌ 34/2 ಹಾಗೂ ರವೀಂದ್ರ ಜಡೇಜಾ 16/1 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು.

Advertisements

ಲಿಯಾಮ್ ಲಿವಿಂಗ್‌ಸ್ಟೋನ್ (27) ಹೊರತುಪಡಿಸಿದರೆ ಉಳಿದ ಬ್ಯಾಟ್ಸ್‌ಮನ್‌ಗಳು 20ರ ಗಡಿ ದಾಟದೆ ಸಂಪೂರ್ಣ ವಿಫಲರಾದರು. ಆರು ಪಂದ್ಯವಾಡಿರುವ ಇಂಗ್ಲೆಂಡ್‌ಗೆ ಇದು ಐದನೇ ಸೋಲು. ಕಳೆದ ಬಾರಿಯ ಚಾಂಪಿಯನ್‌ ಇಂಗ್ಲೆಂಡ್ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ನೀಡಿ 6 ಪಂದ್ಯಗಳಲ್ಲಿ 5 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ? ಭಾರತದ ಮಾಜಿ ಕ್ರಿಕೆಟಿಗ, ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

ರೋಹಿತ್‌, ಸೂರ್ಯಕುಮಾರ್‌ ಉತ್ತಮ ಆಟ

ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌ ಆರಂಭಿಸಿ ನಾಯಕ ರೋಹಿತ್ ಶರ್ಮಾ (87), ಸೂರ್ಯ ಕುಮಾರ್‌ ಯಾದವ್‌ (49) ಹಾಗೂ ಕೆಎಲ್ ರಾಹುಲ್ (39) ರನ್‌ಗಳ ಉಪಯುಕ್ತ ಆಟದಿಂದ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್‌ ದಾಖಲಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X