ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ: ರಮೇಶ್‌ ಜಾರಕಿಹೊಳಿ

Date:

Advertisements
  • ‘ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ’
  • ‘ಶೆಟ್ಟರ್ ಸರಿಯಾದ ಸಮಯಕ್ಕೆ ನಿರ್ಣಯ ತೆಗೆದುಕೊಳ್ಳುತ್ತಾರೆ’

ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ. ಮಹಾರಾಷ್ಟ್ರ ಮಾದರಿಯಲ್ಲಿ ಈ ಸರ್ಕಾರ ಬದಲಾಗುವುದು ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಿರುವ ಆರೋಪಕ್ಕೆ ರಮೇಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.

“ನೋಡುತ್ತೀರಿ, ಒಂದು ರಾತ್ರಿಯಲ್ಲಿ ಎಲ್ಲವೂ ಬದಲಾಗಲಿದೆ. ಅತೀ ಶೀಘ್ರದಲ್ಲಿ ಡಿಕೆ ಶಿವಕುಮಾರ್ ಮಾಜಿ ಮಂತ್ರಿ ಆಗಲಿದ್ದಾರೆ. ರಾಜಕೀಯ ವ್ಯವಸ್ಥೆಯಿಂದ ಇದೆಲ್ಲ ಗೊತ್ತಾಗುತ್ತಿದೆ. ಹೈಕೋರ್ಟ್ ಹಿನ್ನಡೆಯಿಂದ ಅವರು ಮಾಜಿ ಆಗಲಿದ್ದಾರೆ “ಎಂದರು.

Advertisements

”ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ. ಡಿಕೆ ಆ್ಯಂಡ್ ಕಂಪನಿ ಆಪರೇಷನ್ ಕಮಲ ಮಾಡುತ್ತಿದೆ. ಆಪರೇಷನ್ ಕಮಲದ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

“ಡಿಕೆ ಶಿವಕುಮಾರ್ ಸರ್ವಾಧಿಕಾರಿ ಧೋರಣೆ, ಸೊಕ್ಕಿನಿಂದ 2019ರಲ್ಲಿ ಅನಿವಾರ್ಯವಾಗಿ ಆಪರೇಷನ್ ಮಾಡಿದ್ದೆವು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ವಿರುದ್ಧ ನಮ್ಮ ಸಿಟ್ಟಿಲ್ಲ. ಗ್ಯಾರಂಟಿ ಈಡೇರಿಸಲು ಆಗದಿದ್ದಕ್ಕೆ ಆಪರೇಷನ್ ಕಮಲ ಆರೋಪ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್

”ಸಿಡಿ ಮಾಸ್ಟರ್ ಡಿಕೆ ಶಿವಕುಮಾರ್, ಎಲ್ಲರ ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಾನೆ. ಅವನೇನೂ ದೊಡ್ಡವನಲ್ಲ. ಧೈರ್ಯಶಾಲಿ ಅಲ್ಲ ಪುಕ್ಕಲು. ಡಿಕೆ ಶಿವಕುಮಾರ್ ಯಾವಾಗಲೂ ಮೋಸಗಾರ. ಹೋರಾಟ ಮಾಡುವ ಶಕ್ತಿ ಅವನಿಗಿಲ್ಲ” ಎಂದು ಕುಟುಕಿದರು.

“ಜಗದೀಶ್ ಶೆಟ್ಟರ್ ಅವರನ್ನ ನಿನ್ನೆಯೂ ಭೇಟಿ ಮಾಡಿದ್ದೆ. ಶೆಟ್ಟರ್ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಣಯ ತೆಗೆದುಕೊಳ್ಳುತ್ತಾರೆ” ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್‌ ಸಿಡಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X