ಕೇರಳ ಬಾಂಬ್ ಸ್ಫೋಟ | ಸುದ್ದಿ ಮಾಧ್ಯಮಗಳ ಸಮಾಜಘಾತಕ ವರ್ತನೆ ಕುರಿತು ತಾಹೇರ್ ಹುಸೇನ್ ಟೀಕೆ

Date:

Advertisements
  • ‘ಪ್ರಯತ್ನ ವಿಫಲವಾಗಿದ್ದರಿಂದ ಹತಾಶೆಯಾದ ಮಾಧ್ಯಮಗಳು’
  • ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನ

ಕೇರಳದಲ್ಲಿ ನಡೆದ ಬಾಂಬ್ ಸ್ಫೋಟವನ್ನು ನಿರ್ದಿಷ್ಟ ಸಮುದಾಯದ ತಲೆಗೆ ಕಟ್ಟುವ ಆತುರ ತೋರಿಸಿದ ಮಾಧ್ಯಮಗಳ ಮನಸ್ಥಿತಿ ಹೆಚ್ಚು ಅಪಾಯಕಾರಿ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, “ಕೇರಳದ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿ ಈಗಾಗಲೇ ಮಾರ್ಟಿನ್ ಎಂಬ ವ್ಯಕ್ತಿ ಮಧ್ಯಾಹ್ನದೊಳಗೆ ಶರಣಾಗಿದ್ದು ಇಲ್ಲಿನ ಕೆಲವು ಮಾಧ್ಯಮಗಳಿಗೆ ತೀವ್ರ ಸ್ವರೂಪದ ಹತಾಶೆ ತರಿಸಿದೆ. ಯಾಕೆಂದರೆ ಸ್ಪೋಟ ನಡೆದ ತಕ್ಷಣ ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ತೋರಿದ ಪ್ರಯತ್ನ ವಿಫಲವಾಗಿದ್ದರಿಂದ ಹತಾಶರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಪವರ್ ಟಿವಿ ಮುಸ್ಲಿಮ್ ಟೋಪಿದಾರಿ ವ್ಯಕ್ತಿಯ ಫೋಟೋ ಹಾಕಿ ಸುಳ್ಳು ಹರಡಲು ತೀವ್ರ ಆತುರ ತೋರಿತ್ತು. ಪವರ್ ಮಾತ್ರವಲ್ಲ ಇನ್ನು ಕೆಲ ಮಾಧ್ಯಮಗಳು ಆತುರದ ವರದಿ ಪ್ರಕಟಿಸಿ ಈಗ ಕೈ ಹಿಚುಕಿಕೊಂಡಿದ್ದಾರೆ. ಕೆಲವು ಪೀತ ಮಾಧ್ಯಮಗಳು ಸಮಯೋಚಿತವಾಗಿ ವರ್ತಿಸುವ ಬದಲಿಗೆ ಸಮಾಜಘಾತಕವಾಗಿ ವರ್ತಿಸಿವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

“ಆರೋಪಿ ಮುಸ್ಲಿಮ್ ನಾಮಧಾರಿಯಲ್ಲ ಎಂಬುದು ಅವರನ್ನು ಹತಾಶೆಗೊಳಗಾಗುವಂತೆ ಮಾಡಿತು. ಕೆಲವರು ಈ ಬಾಂಬ್‌ ಸ್ಫೋಟವನ್ನು ಇಸ್ರೇಲ್ ವಿರುದ್ದದ ಪ್ರತಿಭಟನೆಗೆ ಜೋಡಿಸಿ ದ್ವೇಷ ಹಬ್ಬಿಸುವ ಎಲ್ಲ ಪ್ರಯತ್ನ ಮಾಡಿದವು. ಮಾರ್ಟಿನ್ ತಾನೇ ಬಾಂಬ್ ಇರಿಸಿದ್ದು ಎಂದು ತಪ್ಪೊಪ್ಪಿಕೊಂಡರೂ ಆತನನ್ನು ತೀವ್ರ ವಿಚಾರಣೆಗೊಳಪಡಿಸಬೇಕು. ವಾಸ್ತವ ವಿಚಾರ ಬಹಿರಂಗವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೆರೆಯ ರಾಜ್ಯದಲ್ಲಿ ಈ ಘಟನೆ ನಡೆದರೂ ಕೆಲವು ಮಾಧ್ಯಮಗಳ ಪೂರ್ವಗ್ರಹ ಪೀಡಿತ ನಡೆಯು ಪ್ರಾಮಾಣಿಕ ಪತ್ರಕರ್ತರ ಮೇಲೆಯೂ ನಂಬಿಕೆ ಕಳಕೊಳ್ಳುವಂತೆ ಮಾಡುತ್ತಿದೆ. ಇಂತಹ ಸಮಾಜಘಾತಕ ಪ್ರಕ್ರಿಯೆಯ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X