ಸಿಎಂ ಕಚೇರಿ ಸೇರಿ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಲೈವ್ ಸ್ಟ್ರೀಮ್ ಮಾಡಲು ಕೆಆರ್‌ಎಸ್‌ ಆಗ್ರಹ

Date:

Advertisements
  • ‘ಸಾರ್ವಜನಿಕ ಆಡಳಿತ ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ’
  • ‘ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇಲ್ಲ’

ಸಾರ್ವಜನಿಕ ಆಡಳಿತವು ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ. ಈ ನಿಟ್ಟಿನಲ್ಲಿ, ಸರ್ಕಾರಿ ಕಚೇರಿಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗುವ ದೃಶ್ಯಗಳು ನಿರಂತರವಾಗಿ ಲೈವ್ ಸ್ಟ್ರೀಮ್ ಮೂಲಕ ಸಾರ್ವಜನಿಕರಿಗೆ ಮುಕ್ತವಾಗಿ ಸಿಗುವಂತಿರಬೇಕು ಎಂದು ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಆಡಳಿತದಲ್ಲಿನ ಬಹುತೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಇದು ಸಹಾಯವಾಗಲಿದೆ” ಎಂದು ತಿಳಿಸಿದ್ದಾರೆ.

“ನವೆಂಬರ್ 10ರೊಳಗೆ ನಮ್ಮ ಮನವಿಗೆ ಸ್ಪಂದಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ, ಮುಂದಾಗದಿದ್ದರೆ, ಕೆ.ಆರ್.ಎಸ್. ಪಕ್ಷವೇ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ, ಸರ್ಕಾರಿ ಕಚೇರಿಗಳಿಗೆ ಈ ವ್ಯವಸ್ಥೆ ಕಲ್ಪಿಸುವ ಕೆಲಸ ಮಾಡಲಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ರಾಜ್ಯದ ಸಾರ್ವಜನಿಕ ಆಡಳಿತವನ್ನು ಗೌಪ್ಯವಾಗಿ ನಿರ್ವಹಿಸಲು ಸರ್ಕಾರಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಇತ್ತೀಚೆಗೆ, ಪ್ರಸ್ತುತ ಸರ್ಕಾರವು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿಯನ್ನು ಪಡೆಯಲು ಅರ್ಜಿ ಹಾಕುವವರ ಮಾಹಿತಿಯನ್ನು ತನಗೆ ಕಳುಹಿಸಿಕೊಡಬೇಕೆಂದು ಎಲ್ಲ ಎಲಾಖೆಗಳಿಗೆ ಆದೇಶ ಹೊರಡಿಸಿತ್ತು. ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಯಿತು, ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಸ್ಪಷ್ಟೀಕರಣ ನೀಡಿ, ಅವರ ಅರಿವಿಗೆ ಬಾರದಂತೆ, ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ’ ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

“ಅಧಿಕಾರ ದುರುಪಯೋಗ ಪಡಿಸಿಕೊಂಡು, ಅಕ್ರಮವಾಗಿ ಸರ್ಕಾರಿ ಆದೇಶ ಹೊರಡಿಸಿರುವ ಅಧೀನ ಕಾರ್ಯದರ್ಶಿಯ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಆಗಿರುವುದಿಲ್ಲ. ಇಲ್ಲಿ ಗಮನಿಸಬೇಕಾದ ಪ್ರಮುಖ ವಿಚಾರವೆಂದರೆ, ಈ ಅಧೀನ ಕಾರ್ಯದರ್ಶಿ ಸರ್ಕಾರದ ಉನ್ನತ ಅಧಿಕಾರಿ ಅಥವಾ ಮಂತ್ರಿಯ ಕುಮ್ಮಕ್ಕಿಲ್ಲದೆ ಇಂತಹ ಅಕ್ರಮ ಆದೇಶ ಹೊರಡಿಸಲು ಸಾಧ್ಯವಿಲ್ಲ. ಅಂದರೆ, ಸರ್ಕಾರದಲ್ಲಿ ಕಾಣದ ಕೈಗಳು ಮಾಹಿತಿಯನ್ನು ಬಹಿರಂಗಪಡಿಸಲು ತಡೆ ಒಡ್ಡುವ ಕೆಲಸ ಮಾಡುತ್ತಿರುವುದು ಕಂಡುಬರುತ್ತದೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

“ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ಆದರೆ, ನಾಮಕಾವಸ್ಥೆಗೆಂದು ಸಿಸಿಟಿವಿ ಅಳವಡಿಸಿದ್ದು, ಯಾವ ಠಾಣೆಯಲ್ಲಿಯೂ ಕೂಡ ಧ್ವನಿ ಮುದ್ರಿಸುವ ಸೌಲಭ್ಯವನ್ನು ಕಲ್ಪಿಸಿಲ್ಲ ಹಾಗೂ ಅರೆಬರೆ ವ್ಯವಸ್ಥೆಯಲ್ಲಿ ಕೇವಲ ಸಿಸಿಟಿವಿ ಅಳವಡಿಸಲಾಗಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X