ಕೆಎಸ್‌ಆರ್‌ಟಿಸಿ | ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲು ಎಂದು ನಿಗಮ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, “ನಿಗಮದಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ₹1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ₹1 ಕೋಟಿ ನೀಡಲಾಗಿದೆ” ಎಂದು ಹೇಳಿದೆ.

“ಇದೀಗ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ  ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ₹3 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸಲು ನಾನಾ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು₹3 ಲಕ್ಷದಿಂದ ₹10ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ₹7 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ” ಎಂದು ಮಾಹಿತಿ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ, ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ  ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ₹100 ಗಳಿಂದ ₹200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ ₹50 ಗಳ ವಂತಿಕೆಯನ್ನು ₹100 ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ” ಎಂದು ತಿಳಿಸಿದೆ.

“ಈ ಪರಿಷ್ಕೃತ ಆದೇಶವು ನವೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X