ಚಲಿಸುತ್ತಿರುವ ರೈಲುಗಳಿಗೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ ನೈರುತ್ಯ ರೈಲ್ವೆ

Date:

Advertisements

ಚಲಿಸುತ್ತಿರುವ ರೈಲುಗಳ ಮೇಲೆ ಕಲ್ಲು ತೂರಾಟ, ರೈಲುಗಳು ಹಾಗೂ ರೈಲ್ವೆ ಆವರಣಗಳಲ್ಲಿ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ ಅ.30 ರಿಂದ ಒಂದು ತಿಂಗಳ ಅವಧಿಯ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ ಇಲಾಖೆ, “ಈ ಕಾರ್ಯಾಚರಣೆಯ ಸಲುವಾಗಿ ರೈಲ್ವೆ ಸಂರಕ್ಷಣಾ ಪಡೆ (ರೈಲ್ವೆ ಸಂರಕ್ಷಣಾ ಪಡೆ) ರೈಲ್ವೆ ಮಂಡಳಿ, ನವದೆಹಲಿಯ ಮಹಾನಿರ್ದೇಶಕ ಮನೋಜ್ ಯಾದವ ಅವರ ಸೂಚನೆಯಂತೆ ಬೆಂಗಳೂರು ವಿಭಾಗದ ಆರ್‌ಪಿಎಫ್ ಅಧಿಕಾರಿಗಳು ಮತ್ತು ವಿಭಾಗದ ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ” ಎಂದು ಹೇಳಿದೆ.

“ಜತೆಗೆ, ರೈಲು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಅವರ ಮಾರ್ಗದರ್ಶನದಲ್ಲಿ ಈ ತಂಡವು ಬೀದಿ ನಾಟಕಗಳು ಅಲ್ಲದೆ ಜಾಗೃತಿ ಮೂಡಿಸುವಂತಹ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ” ಎಂದು ಮಾಹಿತಿ ನೀಡಿದೆ.

Advertisements

“ನಾನಾ ರೈಲು ನಿಲ್ದಾಣಗಳಲ್ಲಿ ಮತ್ತು ರೈಲು ಹಳಿಗಳ ಬಳಿ ಕಲ್ಲು ತೂರಾಟದ ಘಟನೆಗಳು ವರದಿಯಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅ.30 ರಂದು ‘ಕೃಷ್ಣದೇವರಾಯ’ ಹಾಲ್ಟ್ ರೈಲು ನಿಲ್ದಾಣದ ಬಳಿ “ಬೀದಿ ನಾಟಕ” ನಡೆಸುವ ಮೂಲಕ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ರೈಲ್ವೇ ಕಾಯಿದೆ 1989 ರ ಸೆಕ್ಷನ್ – 153 ಮತ್ತು 154 ರ ಅಡಿಯಲ್ಲಿ ದಂಡ ಅಥವಾ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದು. ರೈಲು ಪ್ರಯಾಣದ ಸಮಯದಲ್ಲಿ ದಹನಕಾರಿ ವಸ್ತುಗಳನ್ನು ಒಯ್ಯುವುದು ಶಿಕ್ಷಾರ್ಹ ಅಪರಾಧವಾಗಿದೆ. 1989ರ ರೈಲ್ವೆ ಕಾಯಿದೆಯ ಸೆಕ್ಷನ್ 164ರ ಅಡಿಯಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹1000 ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು” ಎಂದು ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X