ಏಕದಿನ ವಿಶ್ವಕಪ್ 2023 | ನಾಲ್ಕು ಸೋಲಿನ ನಂತರ ಬಾಂಗ್ಲಾ ಸೋಲಿಸಿದ ಪಾಕ್

Date:

Advertisements

ಪಾಕಿಸ್ತಾನ ತಂಡ  ಐಸಿಸಿ ಏಕದಿನ ವಿಶ್ವಕಪ್‌ 2023 ರ ಕ್ರಿಕೆಟ್‌ ಟೂರ್ನಿಯಲ್ಲಿ ಸತತ ನಾಲ್ಕು ಸೋಲಿನ ನಂತರ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಪಾಕ್‌ ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ 205 ರನ್ನುಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಬಾಬರ್‌ ಅಜಾಮ್‌ ನೇತೃತ್ವದ ಪಾಕಿಸ್ತಾನ ತಂಡ 32.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಗಳಿಸಿತು.

ಫಕರ್‌ ಜಮಾನ್‌ (81) ಹಾಗೂ ಅಬ್ದುಲ್ಲಾ ಶಫೀಕ್ (68) ಅರ್ಧ ಶತಕ ಗಳಿಸಿ ಗೆಲುವಿನ ರೂವಾರಿಯಾದರು. ಈಗಾಗಲೇ ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ ತಲುಪಲು ವಿಫಲವಾಗಿದ್ದು, ಐದನೇ ಸ್ಥಾನ ಪಡೆಯಲು ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಬೇಕಿದೆ.

Advertisements

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾಕ್ಕೆ ಜಯ; ಸೋಲಿನಲ್ಲೂ ಮಿಂಚಿದ ಪಾಕ್‌

ಮೊದಲು ಟಾಸ್‌ ಗೆದ್ದ ಬಾಂಗ್ಲಾದೇಶದ ತಂಡದ ನಾಯಕ ಶಕೀಬ್‌ ಅಲ್‌ ಹಸನ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಆದರೆ ಪಾಕಿಸ್ತಾನದ ಬ್ಯಾಟಿಂಗ್‌ಗೆ ತತ್ತರಿಸಿ ಕೇವಲ 45.1 ಓವರ್‌ಗಳಲ್ಲಿ 204 ರನ್‌ ಗಳಿಸಿ ಆಲೌಟ್‌ ಆಗಿತು.

ಮಹಮದುಲ್ಲಾ(56), ಲಿಟ್ಟನ್‌ ದಾಸ್ (45) ಹಾಗೂ ನಾಯಕ ಶಕೀಬ್‌ ಅಲ್‌ ಹಸನ್‌ ಜವಾಬ್ದಾರಿಯುತ ಆಟವಾಡಿದ ಪರಿಣಾಮ ತಂಡದ ಮೊತ್ತ 200ರ ಗಡಿ ದಾಟಲು ಕಾರಣವಾಯಿತು.

ಪಾಕ್‌ ಪರ ಅಫ್ರಿದಿ ಮತ್ತು ಮೊಹಮ್ಮದ್‌ ವಾಸಿಂ ಜೂನಿಯರ್‌ ತಲಾ ಮೂರು ವಿಕೆಟ್‌ ಪಡೆದರು. ರೌಫ್‌ ಎರಡು ವಿಕೆಟ್‌ ಪಡೆದರೆ, ಇಫ್ತಿಕರ್‌ ಮತ್ತು ಉಸಾಮಾ ಮಿರ್‌ ತಲಾ ಒಂದು ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X