ಬೆಂಗಳೂರು | ಮೂರು ದಿನವಾದರೂ ಬೋನಿಗೆ ಬೀಳದ ಚಿರತೆ; ವೈದ್ಯ ಸೇರಿದಂತೆ ಮೂವರ ಮೇಲೆ ದಾಳಿ

Date:

Advertisements

ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಕಾಣಿಸಿಕೊಂಡಿದ್ದ ಚಿರತೆ, ನಗರಕ್ಕೆ ಬಂದು ಮೂರು ದಿನ ಕಳೆದರೂ ಇನ್ನೂ ಬೋನಿಗೆ ಚಿರತೆ ಬಿದ್ದಿಲ್ಲ. ಇದರಿಂದ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ.

ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪತ್ತೆಯಾಗಿದೆ. ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸತತವಾಗಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ, ಚಿರತೆಯ ಕುರುಹು ಪತ್ತೆಯಾಗಿರಲಿಲ್ಲ.

ಅ.31ರಂದು ಅರಣ್ಯಾಧಿಕಾರಿಗಳು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆಗೆ ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಅರವಳಿಕೆ ಚುಚ್ಚುಮದ್ದು ನೀಡುವ ಸಮಯದಲ್ಲಿ ವೈದ್ಯ ಕಿರಣ್ ಮೇಲೆ ಚಿರತೆ ದಾಳಿ ಮಾಡಿ ಅವರ ಕುತ್ತಿಗೆಗೆ ಪರಚಿ ಪರಾರಿಯಾಗಿದೆ. ಇದೇ ವೇಳೆ, ಚಿರತೆ ಶಾರ್ಪ್​ ಶೂಟರ್ ಧನ್‌ರಾಜ್ ಎಂಬುವವರ ಮೇಲೂ ದಾಳಿ ಮಾಡಿ ಅವರ ಕಾಲು ಮತ್ತು ಭುಜಕ್ಕೆ ಗಾಯಗೊಳಿಸಿದೆ. ಕಾರ್ಯಾಚರಣೆಯಲ್ಲಿದ್ದ ಇನ್ನೊರ್ವ ಬಿಬಿಎಂಪಿ ಸಿಬ್ಬಂದಿ ಮಹೇಶ್ ಎಂಬವರ ಮೇಲೆ ದಾಳಿ ಮಾಡಿ, ಅವರ ಕಾಲಿಗೆ ಗಾಯಗೊಳಿಸಿದೆ.

Advertisements

ಕೂಡಲೇ ಅಂಬ್ಯುಲೆನ್ಸ್​ ಮೂಲಕ ವೈದ್ಯ ಕಿರಣ್ ಸೇರಿದಂತೆ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಗಿದೆ. ಆದರೆ, ಅರವಳಿಕೆ ನೀಡಿದ 15 ನಿಮಿಷ ಮಾತ್ರ ಅದರ ಪರಿಣಾಮ ಇರುತ್ತದೆ. ಚಿರತೆ ಕಣ್ಣಿಗೆ ಕಾಣದಂತೆ ತಪ್ಪಿಸಿಕೊಳ್ಳುತ್ತಿದ್ದು, ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿರತೆಗೆ ‘ಹೈಡೋಸ್’ ಇರುವ​ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದತೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶದ ಬ್ಯಾಂಕ್‌ಗಳಿಗೆ ನವೆಂಬರ್ ತಿಂಗಳಲ್ಲಿ 15 ದಿನ ರಜೆ; ಯಾಕೆ? ಇಲ್ಲಿದೆ ಮಾಹಿತಿ

ಅ.29ರಂದು ತಡರಾತ್ರಿ ಕೃಷ್ಣಾರೆಡ್ಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ರಾತ್ರಿ 11 ಗಂಟೆ ವೇಳೆ ಕಾಂಪೌಂಡ್ ಜಿಗಿದು ಚಿರತೆ ಓಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಥರ್ಮಲ್ ಡ್ರೋಣ್‌ನಲ್ಲಿ ಚಿರತೆಯ ಚಲನವಲನ ಸೆರೆಯಾಗಿತ್ತು. ಸದ್ಯ, ಹುಣಸೂರು ವನ್ಯಜೀವಿ ವಿಭಾಗದಿಂದ ಆಗಮಿಸಿದ್ದ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X