ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

Date:

Advertisements

  • ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್‌ ಅವರಿಗಿದೆ
  • ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ

ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು ಮಾಜಿ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಹೇಳಿಕೊಂಡಿದ್ದಾರೆ.

ನಂಜನಗೂಡು ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಮಹದೇವಪ್ಪ, “ನಂಜನಗೂಡು ಕ್ಷೇತ್ರದಲ್ಲಿನ ನಮ್ಮ ಬೆಂಬಲಿಗರು ಟಿಕೆಟ್ ವಿಷಯವನ್ನು ಮರು ಪರಿಶೀಲಿಸಿ ಮಹದೇವಪ್ಪನವರಿಗೇ ಟಿಕೆಟ್ ನೀಡಬೇಕೆಂದು ಪತ್ರಿಕಾಗೋಷ್ಠಿ ನಡೆಸಿರುವುದು ನನ್ನ ಗಮನಕ್ಕೆ ಬಂದಿದೆ. ರಾಜಕೀಯದ ಆಚೆಗೂ ಕೂಡಾ ಮಾನವೀಯತೆ ಎಂಬುದು ಅತಿ ಮುಖ್ಯವಾದ ಸಂಗತಿಯಾಗಿರುವ ಕಾರಣ ಧ್ರುವನಾರಾಯಣ್ ಅವರ ಅಗಲಿಕೆಯ ಈ ಸಂದರ್ಭದಲ್ಲಿ ರಾಜಕೀಯಕ್ಕಿಂತಲೂ ಮಾನವೀಯತೆ ಮುಖ್ಯವೆಂದು ನಂಜನಗೂಡು ಕ್ಷೇತ್ರದಲ್ಲಿ ಅವರ ಪುತ್ರ ದರ್ಶನ್ ಅವರನ್ನು ಬೆಂಬಲಿಸಿರುತ್ತೇನೆ” ಎಂದಿದ್ದಾರೆ.

“ಹೀಗಾಗಿ ದಯಮಾಡಿ ಯಾರೂ ಕೂಡಾ ಗೊಂದಲ ಸೃಷ್ಟಿ ಮಾಡದೇ ಸಮಚಿತ್ತತೆಯಿಂದ ವರ್ತಿಸಬೇಕೆಂದು ಬೆಂಬಲಿಗರಲ್ಲಿ ವಿನಂತಿಸಿಕೊಳ್ಳುತ್ತೇನೆ. ನಂಜನಗೂಡು ಟಿಕೆಟ್ ವಿಷಯದಲ್ಲಿ ನಾನು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಮಾನವೀಯತೆ ಮೊದಲು ರಾಜಕಾರಣ ನಂತರ” ಎಂದು ಮಹದೇವಪ್ಪ ಹೇಳಿಕೊಂಡಿದ್ದಾರೆ.

Advertisements
bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X