ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

Date:

Advertisements

ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ ಮ್ಯಾನೇಜರ್‌ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್​ವೊಂದರಲ್ಲಿ ಈ ಘಟನೆ ನಡೆದಿದೆ. ಪಬ್‌ ಮ್ಯಾನೇಜರ್ ರವಿಕಾಂತ್ ಎಂಬುವವರು ಆರ್​ ಆರ್ ನಗರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

“ಶ್ರೇಯಸ್ ಹಾಗೂ ಆತನ ಸ್ನೇಹಿತರು ಅಕ್ಟೋಬರ್ 24 ರಂದು ರಾತ್ರಿ 10:45ರ ಸುಮಾರಿಗೆ ಐಡಿಯಲ್ ಹೋಮ್ಸ್ ಬಳಿಯ ಪಬ್​ಗೆ ಬಂದಿದ್ದರು. ಈ ವೇಳೆ, ಪಬ್​ನಲ್ಲಿ ಕನ್ನಡ‌ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ನ ಮ್ಯಾನೇಜರ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಜತೆಗೆ ಅವರ ಜೊತೆಯಲ್ಲಿಯೇ ಇದ್ದ ಮಹಿಳೆಯೊಬ್ಬರ ಸಹಾಯದಿಂದ ಪಬ್‌ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ದೂರು ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 3 ದಿನಗಳ ನಂತರ ಬಲೆಗೆ ಬಿದ್ದ ಚಿರತೆ

ಪಬ್ ಮ್ಯಾನೇಜರ್ ರವಿಕಾಂತ್ ನೀಡಿದ ದೂರಿನ ಅನ್ವಯ ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಆರ್.ಆರ್.ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X