ಕೆಟ್ಟಿದ್ಯಾ ಶಿವಮೊಗ್ಗ ಏರ್‌ಪೋರ್ಟ್‌ ನಸೀಬು; ಬೆಂಗಳೂರಿಗೆ ಹಾರಬೇಕಿದ್ದ ವಿಮಾನ ರದ್ದು

Date:

Advertisements

ಶಿವಮೊಗ್ಗ ವಿಮಾನ ನಿಲ್ದಾಣ ಆರಂಭವಾದ ಬಳಿಕ ಒಂದಿಲ್ಲೊಂದು ಸಮಸ್ಯೆಯ ಕಾರಣಕ್ಕೆ ಮತ್ತೆ-ಮತ್ತೆ ಸುದ್ದಿಯಾಗುತ್ತಲೇ ಇದೆ. ಇದೀಗ, ಶಿವಮೊಗ್ಗ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಹಾರಾಟ ನಡೆಸಬೇಕಿದ್ದ ವಿಮಾನವೊಂದು ತಾಂತ್ರಿಕ ತೊಂದರೆಯಿಂದಾಗಿ ರದ್ದಾಗಿದೆ. ಪರಿಣಾಮ ಬೆಂಗಳೂರಿಗೆ ಹೊರಟಿದ್ದ ಪ್ರಯಾಣಿಕರು ಪರದಾಡಿದ್ದಾರೆ.

ಬುಧವಾರ ಬೆಳಗ್ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಹೊರಡಬೇಕಿತ್ತು. ವಿಮಾನದಲ್ಲಿ ಪ್ರಯಾಣಿಸಲು 60 ಮಂದಿ ಪ್ರಯಾಣಿಕರು ಟಿಕೆಟ್‌ ಪಡೆದಿದ್ದರು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗಗೆ ತೆರಳಿದ್ದ ವಿಮಾನ ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ 11-05ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ, 15 ನಿಮಿಷ ತಡವಾಗಿ 11-20ಕ್ಕೆ ಲ್ಯಾಂಡ್ ಆಗಿದೆ. ಮತ್ತೆ, 11-30ಕ್ಕೆ ಶಿವಮೊಗ್ಗದಿಂದ ಮತ್ತೆ ಬೆಂಗಳೂರಿಗೆ ಹೊರಡಬೇಕಿದ್ದ ಅದೇ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ.

Advertisements

ಇತ್ತೀಚೆಗೆ, ಅಕ್ಟೋಬರ್ 12ರಂದು ಇಂಡಿಯೋ ಕಂಪನಿಯದ್ದೇ ಆದ ವಿಮಾನವು ಬೆಂಗಳೂರಿನಿಂದ ಶಿವಮೊಗ್ಗಗೆ ತೆರಳಿತ್ತು. ಆಗಲೂ, ಹವಮಾನ ವೈಪರಿತ್ಯದ ಕಾರಣ ಲ್ಯಾಂಡ್‌ ಆಗಲು ಪರದಾಡಿತ್ತು. 20 ನಿಮಿಷ ಸುತ್ತಾಡಿ ಆ ಬಳಿಕ ಲ್ಯಾಂಡ್ ಆಗಿತ್ತು.

ಮಾತ್ರವಲ್ಲದೆ, ಅಕ್ಟೋಬರ್ 8ರಂದು ಬೆಂಗಳೂರಿನಿಂದ ಶಿವಮೊಗ್ಗಗೆ ತೆರಳಿದ್ದ ವಿಮಾನವೊಂದು ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗದೇ ಬೆಂಗಳೂರಿಗೆ ವಾಪಸ್‌ ಆಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X