ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

Date:

Advertisements

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗೌರಿಬಿದನೂರಿನಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಹೇಶ್ ಪತ್ರಿ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರ ನಡುವೆ ವಾಗ್ವಾದ ನಡೆದಿದೆ. ಕಾರ್ಯಕರ್ತರು ತಹಶೀಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಬುಧವಾರ ಕನ್ನಡ ಧ್ವಜ ಹಾರಿಸಲು ಅನುಮತಿ ಕೋರಿ ಕನ್ನಡಪರ ಸಂಘಟನೆಗಳು ತಹಶೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ತಹಶೀಲ್ದಾರ್ ಮಹೇಶ್ ಪತ್ರಿ ಅವರು ಸಂಘಟನೆಗಳಿಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ, ಕನ್ನಡಪರ ಸಂಘಟನೆಗಳ ಮುಖಂಡರು ತಹಶೀಲ್ದಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹನ ಪಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X