ತಂದೆ ಬದುಕಿದ್ದಾಗಲೇ ಮಗ ಸಿಎಂ ಆಗಿರುವ ಇತಿಹಾಸ ಇದೆಯೇ?; ಎಚ್‌ಡಿಕೆ ವಿರುದ್ಧ ಚಲುವರಾಯಸ್ವಾಮಿ ಲೇವಡಿ

Date:

Advertisements

ಕೆಂಗಲ್ ಹನುಮಂತಯ್ಯನವರ ಕಾಲದಿಂದ ಇಲ್ಲಿಯವರೆಗೆ ತಂದೆ ಬದುಕಿರುವುವಾಗಲೇ ಮಗ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಇತಿಹಾಸ ಕರ್ನಾಟಕದಲ್ಲಿ ಇದೆಯೇ? ಆದರೆ, ಕುಮಾರಸ್ವಾಮಿ ಅದನ್ನು ಮಾಡಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಇತಿಹಾಸದಲ್ಲಿ ತಂದೆ ಬದುಕಿರುವಾಗಲೇ ಮಗ ಮುಖ್ಯಮಂತ್ರಿಯಾಗಿಲ್ಲ. ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ತೀರಿಕೊಂಡ ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದರು. ಆದರೆ, ದೇವೇಗೌಡರು ಇದ್ದಾಗಲೇ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

“ದೇವೇಗೌಡರನ್ನು ಹೊರತುಪಡಿಸಿದರೆ ಕುಮಾರಸ್ವಾಮಿ ಏನು? ನಾನೇನಾದರೂ ಎಚ್.ಡಿ ದೇವೇಗೌಡರ ಮಗನಾಗಿದ್ದರೆ ನನ್ನ ರಾಜಕೀಯ ಭವಿಷ್ಯ ಇವತ್ತೇ ಕೊನೆಯಾದರೂ ಸಹ ಅವರಿಗೆ ನೋವು ಕೊಟ್ಟು ರಾಜಕಾರಣ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

Advertisements

“ಕುಮಾರಸ್ವಾಮಿ ಯಾರಿಗೂ ಹೇಳದೆ-ಕಳದೆ ಅಮಿತ್ ಶಾ ಜೊತೆ ಸೇರುತ್ತಾರೆಂದರೆ ಬಿಜೆಪಿ ಮತ್ತು ಜೆಡಿಎಸ್ ಪರಿಸ್ಥಿತಿ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಷಡ್ಯಂತ್ರ ಹೆಣೆಯುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X