ತುಮಕೂರು | ಸಿಎಂ ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ: ಗೃಹ ಸಚಿವ ಪರಮೇಶ್ವರ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ. ಅವರು ನಮ್ಮ ಮನೆಗೆ ಬಂದಾಗ ಊಟದ ಸಮಯ ಆಗಿತ್ತು. ಅವರು ನಾಟಿ ಕೋಳಿ ಇಷ್ಟಪಡ್ತಾರೆ. ಹಾಗಾಗಿ ನಾಟಿ ಕೋಳಿ ಸಾರು ಮಾಡಿಸಿದ್ದೆ. ಮಾಡಿಕೊಂಡು ಹೋದ್ರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರಲ್ಲಿ ದಸರಾಗೆ ಹೋದಾಗ ಪರಮೇಶ್ವರ್ ಒಂದು ಊಟ ಹಾಕಿಸಿಲ್ಲ ಅಂತ ಸಿದ್ದರಾಮಯ್ಯ ಹೇಳಿದ್ರು. ಬೆಂಗಳೂರಿಗೆ ಬಂದಾಗ ಬನ್ನಿ ನಾಳೆ ಇಲ್ಲ ನಾಡಿದ್ದು ಅಂತ ಹೇಳಿದ್ದೆ. ಹಾಗಾದ್ರೆ ಫಿಕ್ಸ್ ಮಾಡಿ ಬರ್ತಿನಿ ಅಂತ ಹೇಳಿದ್ರು” ಎಂದು ಹೇಳಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಜನ 135 ಶಾಸಕರನ್ನ ಆರಿಸಿ ಕಳುಹಿಸಿದ್ದಾರೆ. ನಾವು ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ಕೊಡ್ತಿದ್ದೇವೆ‌. ಪ್ರತಿಪಕ್ಷದವರು ಟೀಕೆ ಮಾಡ್ತಾರೆ ಮಾಡಲಿ. ಧನಾತ್ಮಕ ಟೀಕೆಗಳನ್ನ ಮಾಡಿ ಅಂತ ನಾನು ಅವರಲ್ಲಿ ಮನವಿ ಮಾಡ್ತಿನಿ” ಎಂದರು.

Advertisements

“ಬಿಜೆಪಿಗರು ಸಲಹೆ ಸೂಚನೆಗಳನ್ನ ಕೊಡಲಿ. ನಾವು ಅದನ್ನ ಸ್ವೀಕಾರ ಮಾಡ್ತಿವಿ. ಅದನ್ನ ಬಿಟ್ಟು ಸರ್ಕಾರ ಕೆಡುತ್ತಿವಿ, 20 ಜನ ಅಲ್ಲಿ ಹೋದ್ರು, 30 ಜನ ಇಲ್ಲೋದ್ರು ಅಂತ ಮಾತಾಡೋದ್ರಿಂದ ಪ್ರಯೋಜನ ಇಲ್ಲ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X