ತುಮಕೂರು | ರಾಜಕಾರಣಿಗಳು ಭವಿಷ್ಯದ ಬಗ್ಗೆ ಯೋಚಿಸಬೇಕು: ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ

Date:

Advertisements

ರಾಜಕಾರಣ ಬರೀ ಚುನಾವಣೆಗೆ ಸೀಮಿತವಾಗಬಾರದು. ರಾಜಕಾರಣಿಯಾದವರು ಕಲೆ, ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ ಪಟೇಲ ಅಭಿಪ್ರಾಯಪಟ್ಟರು.

ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ ನೀನಾಸಂ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಈಗಿನ ರಾಜಕಾರಣ ಚುನಾವಣೆಯನ್ನು ಕೇಂದ್ರೀಕರಿಸಿದೆ. ನಮ್ಮ ತಂದೆ ಜೆ.ಎಚ್ ಪಟೇಲ್ ಹಾಗೂ ರಾಮಕೃಷ್ಣ ಹೆಗಡೆ ಅವರು 24 ಗಂಟೆ ಚುನಾವಣೆ ಬಗ್ಗೆ ಯೋಚಿಸುತ್ತಿರಲಿಲ್ಲ. ಬದಲಿಗೆ ಸಂಗೀತ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಒಲವುಳ್ಳವರಾಗಿದ್ದರು. ರಾಜಕಾರಣಿಯಾದವನು ಸಾಮಾಜಿಕ ಕಳಕಳಿ ಉಳ್ಳವನಾಗಿರಬೇಕು” ಎಂದರು.

“ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದಾಗ 20 ವರ್ಷ ಸಿನಿಮಾ ಬ್ಯಾನ್ ಮಾಡಬೇಕು. ಆಗ ಮಾತ್ರ ನಾಟಕ ಕಲೆ ಜೀವಂತವಾಗಿರುತ್ತದೆ ಎಂದಿದ್ದರು. ಆದರೆ, ನಾಟಕ ಕಲೆ ಯಾವತ್ತೂ ಸಾಯುವುದಿಲ್ಲ. ಸಾವಿರಾರು ವರ್ಷಗಳಿಂದ ನಾಟಕ ಕಲೆ ಇದೆ. ಮುಂದೆ ಸಾವಿರಾರು ವರ್ಷ ನಾಟಕ ಕಲೆ ಜೀವಂತವಾಗಿರುತ್ತದೆ” ಎಂದರು.

Advertisements

ಟೂಡಾ ಮಾಜಿ ಅಧ್ಯಕ್ಷ ಹಾಗೂ ಕೈಗಾರಿಕೋದ್ಯಮಿ ಚಂದ್ರಶೇಖರ್ ಮಾತನಾಡಿ, “ಹೆಗ್ಗೋಡಿನ ನೀನಾಸಂ ಪ್ರತಿ ವರ್ಷ ಪರಿಣಾಮಕಾರಿ ನಾಟಕಗಳನ್ನು ಆಡಿಸುತ್ತಾ ಬಂದಿದೆ. ಸೀರಿಯಲ್ ಗಳ ಹಾವಳಿ ನಡುವೆಯೂ ಇಷ್ಟೊಂದು ಜನರು ನಾಟಕ ನೋಡಲು ಬಂದಿರುವುದು ಖುಷಿಯ ಸಂಗತಿ ಎಂದರು. ನೀನಾಸಂ ನಿಂದ ಕಲಿತು ಬಂದವರು ದೊಡ್ಡ ದೊಡ್ಡ ನಾಟಕ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದರು. ಹಾಗೆಯೇ ಸೀರಿಯಲ್, ಸಿನಿಮಾಗಳಲ್ಲೂ ಕೂಡ ಕೆಲಸ ನಿರ್ವಹಿಸುತ್ತಿದ್ದಾರೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಮಾತನಾಡಿ, “ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳ ನಡುವೆ ವಿಭಿನ್ನ ನಾಟಕಗಳನ್ನು ತುಮಕೂರಿನ ಝೆನ್ ಟೀಮ್ ತೋರಿಸುತ್ತಿದೆ. ನೀನಾಸಂ, ರಂಗಾಯಣ, ರಾಷ್ಟ್ರೀಯ ನಾಟಕ ಶಾಲೆಗಳ ನಾಟಕಗಳನ್ನು ತುಮಕೂರಿನಲ್ಲಿ ಝೆನ್ ಟೀಮ್ ಆಯೋಜಿಸುತ್ತಿರುವುದು ಶ್ಲಾಘನೀಯ” ಎಂದರು.

ಕಾರ್ಯಕ್ರಮದಲ್ಲಿ ಝೆನ್ ಟೀಮ್ ನ ಉಗಮ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್. ಪಲ್ಲವಿ ನಾಗೇಂದ್ರ ಇನ್ನಿತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X