ಚೈತ್ರಾ ವಂಚನೆ ಪ್ರಕರಣ | ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಮುಂದಾದ ಸಿಸಿಬಿ

Date:

Advertisements

ವಿಧಾನಸಭಾ ಚುನಾವಣಾ ಸಮಯದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ಆರೋಪಿ ಚೈತ್ರಾ ಕುಂದಾಪುರ ಮತ್ತವರ ಗ್ಯಾಂಗ್‌ನ ವಿಚಾರಣೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿ, ಇದೀಗ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದಾರೆ. ಸದ್ಯ ಇವರ ವಿರುದ್ಧ ದೋಷಾರೋಪ ಪಟ್ಟಿಯನ್ನು ಮುಂದಿನ ವಾರ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಪೊಲೀಸರು 68 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಬರೋಬ್ಬರಿ ₹4 ಕೋಟಿ 11 ಲಕ್ಷ ಹಣವನ್ನು ರಿಕವರಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳ ವಂಚನೆ ಕುರಿತಾಗಿ ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯ ಕಲೆಹಾಕಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉದ್ದೇಶಪೂರ್ವಕವಾಗಿ ವ್ಯಕ್ತಿಯ ಮೇಲೆ ಸ್ಕಾರ್ಪಿಯೊ ಹತ್ತಿಸಿ ಹತ್ಯೆ: ಏನಿದು ಘಟನೆ?

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಇದ್ದ ಎಲ್ಲ ವಿಡಿಯೋ, ಆಡಿಯೋ ಹಾಗೂ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ವಂಚನೆಗೆ ಸಂಬಂಧಿಸಿದಂತೆ ದೂರುದಾರರಿಂದಲೇ ಬರೋಬ್ಬರೀ 10 ವಿಡಿಯೊಗಳನ್ನು ಪಡೆಯಲಾಗಿದೆ.

ಅಲ್ಲದೇ, ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್ ಮಾಡಿ, ಮೊಬೈಲ್ ಚಾಟ್, ಕರೆಗಳ ಮೂಲಕ ಮಾಹಿತಿ ಪಡೆಯಲಾಗಿದೆ. ಈ ವರದಿಯನ್ನು ಕೂಡ ಚಾರ್ಜ್‌ಶೀಟ್​ನಲ್ಲಿ‌ ಸಿಸಿಬಿ ಪೊಲೀಸರು ಉಲ್ಲೇಖಿಸಿದ್ದಾರೆ.

ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X