ಐಪಿಎಲ್ 2023 | ಹೈವೋಲ್ಟೇಜ್‌ ಪಂದ್ಯದ ಟಾಸ್‌; ಕೆಕೆಆರ್‌ನಲ್ಲಿ ಪ್ರಮುಖ ಬದಲಾವಣೆ

Date:

Advertisements
  • ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್‌ಸಿಬಿ
  • ಕೆಕೆಆರ್‌ಗೆ ಕಾಡಿದ ಪ್ರಮುಖ ಆಟಗಾರರ ಅನುಪಸ್ಥಿತಿ

ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ, ಕೆಕೆಆರ್‌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ತವರಿನಲ್ಲಿ ಮಣಿಸಿದ ಹುಮ್ಮಸ್ಸಿನಲ್ಲಿರುವ ಫಾಫ್ ಡು ಪ್ಲೆಸಿಸ್ ಸಾರಥ್ಯದ ಆರ್‌ಸಿಬಿ, ಕೆಕೆಆರ್ ಜೊತೆಗಿನ ಎರಡನೇ ಪಂದ್ಯದಲ್ಲೂ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ.  

ಮತ್ತೊಂದೆಡೆ ತನ್ನ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿದ್ದ ನಿತೀಶ್ ರಾಣಾ ನೇತೃತ್ವದ ಕೋಲ್ಕತಾ ನೈಟ್‌ ರೈಡರ್ಸ್, ತವರು ಅಭಿಮಾನಿಗಳ ಬೆಂಬಲದೊಂದಿಗೆ ಆರ್‌ಸಿಬಿ ವಿರುದ್ಧ ಗೆದ್ದು ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ.

Advertisements

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಐಪಿಎಲ್​ನಲ್ಲಿ ಈವರೆಗೂ ಒಟ್ಟು 30 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಕೆಕೆಆರ್​ ತಂಡವು 16 ಬಾರಿ ಮತ್ತು ಆರ್‌ಸಿಬಿ 14 ಗೆಲುವು ಕಂಡಿದೆ.

ಶಕಿಬ್‌ ಬದಲಿಗೆ ಜೇಸನ್ ರಾಯ್

ಗಾಯದ ಸಮಸ್ಯೆಯಿಂದ ಕೆಕೆಆರ್ ನಾಯಕ ಶ್ರೇಯಸ್‌ ಅಯ್ಯರ್‌ ಈ ಬಾರಿಯ ಐಪಿಎಲ್‌ ಟೂರ್ನಿಯಿಂದಲೇ ಹೊರ ನಡೆದಿದ್ದಾರೆ. ಮತ್ತೋರ್ವ ಪ್ರಮುಖ ಆಲ್‌ರೌಂಡರ್‌ ಶಕಿಬ್‌ ಅಲ್ ಹಸನ್‌ ಅವರು ಈ ಟೂರ್ನಿಗೆ ಅಲಭ್ಯರಾಗಿದ್ದು, ಶಕಿಬ್ ಬದಲಿ ಆಟಗಾರನಾಗಿ ಇಂಗ್ಲೆಂಡ್​ನ ಸ್ಫೋಟಕ ಆರಂಭಿಕ ಆಟಗಾರ​ ಜೇಸನ್ ರಾಯ್ ಜತೆ ಕೆಕೆಆರ್ ಒಪ್ಪಂದ ಮಾಡಿಕೊಂಡಿದೆ. ಜೇಸನ್ ರಾಯ್ ಅವರನ್ನು ₹2.8 ಕೋಟಿಗೆ ಖರೀದಿಸಿದೆ.

2017ರಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ರಾಯ್, ಇದುವರೆಗೆ 13 ಪಂದ್ಯಗಳನ್ನಾಡಿದ್ದಾರೆ. 29.90 ಸರಾಸರಿಯಲ್ಲಿ ಒಟ್ಟು 329 ರನ್ ಗಳಿಸಿದ್ದಾರೆ. ಕಳೆದ ಬಾರಿ ಜೇಸನ್‌ರನ್ನು ಗುಜರಾತ್ ಟೈಟಾನ್ಸ್ ₹2 ಕೋಟಿಗೆ ಖರೀದಿಸಿತ್ತು. ಆದರೆ ಟೂರ್ನಿಯಿಂದ ರಾಯ್​ ಹಿಂದೆ ಸರಿದಿದ್ದರು.‌

ಪಂದ್ಯವಾಡುವ ಹನ್ನೊಂದರ ಬಳಗ:

ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ಮನದೀಪ್ ಸಿಂಗ್, ರಹ್ಮಾಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಆಂಡ್ರೆ ರಸೆಲ್, ಟಿಮ್ ಸೌಥಿ, ಸುನಿಲ್ ನರೈನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಅನುಕುಲ್ ರಾಯ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಕರಣ್‌ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮುಹಮ್ಮದ್ ಸಿರಾಜ್.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X